ಆ್ಯಪ್ನಗರ

ಮೇಕೆದಾಟಿಗಾಗಿ ಒಗ್ಗಟ್ಟಾಗಿದ್ದೇವೆ: ಡಿವಿಎಸ್‌

''ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ ಈ ವಿಚಾರದಲ್ಲಿ ನಾವೆಲ್ಲಾ ಪಕ್ಷಭೇದ ಮರೆದು ಒಗ್ಗಟ್ಟಿನಿಂದ ಇದ್ದೇವೆ ಮುಖ್ಯಮಂತ್ರಿ ಎಚ್‌...

Vijaya Karnataka 30 Dec 2018, 5:00 am
ಬೆಂಗಳೂರು: ''ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ವಿಚಾರದಲ್ಲಿ ನಾವೆಲ್ಲಾ ಪಕ್ಷಭೇದ ಮರೆದು ಒಗ್ಗಟ್ಟಿನಿಂದ ಇದ್ದೇವೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಮಿಳುನಾಡು ಸಿಎಂ ಗೆ ಪತ್ರ ಬರೆದು ಮಾತುಕತೆಗೆ ಆಹ್ವಾನಿಸಿರುವುದು ಒಳ್ಳೆಯ ಬೆಳವಣಿಗೆ,'' ಎಂದು ಸಚಿವ ಡಿವಿಎಸ್‌ಹೇಳಿದರು.
Vijaya Karnataka Web sadanada


ನಗರ ಜಿಲ್ಲಾ ಪಂಚಾಯಿತಿಯಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಎಲ್ಲರೂ ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇವೆ. ಇತ್ತೀಚೆಗೆ ಹೊಸದಿಲ್ಲಿನ ನನ್ನ ನಿವಾಸದಲ್ಲಿ ನಡೆದ ಸಭೆಗೆ ಇದೇ ಮೊದಲ ಸಲ ಸಂಸದರು, ರಾಜ್ಯಸಭಾ ಸದಸ್ಯರು ಸೇರಿ 34 ಮಂದಿ ಭಾಗವಹಿಸಿದ್ದರು. ತಮಿಳುನಾಡಿನ ಸಂಸದರು ಮೇಕೆದಾಟು ಯೋಜನೆ ವಿರೋಧಿಸಿ ಕಲಾಪದಲ್ಲಿ ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಮಾತುಕತೆಯಿಂದ ಮಾತ್ರ ಸಮಸ್ಯೆಗೆ ಪರಿಹಾರ ಸಾಧ್ಯ ಎಂಬುದನ್ನು ಅವರು ಅರಿತುಕೊಳ್ಳಬೇಕು,'' ಎಂದರು.

''ಮೇಕೆದಾಟು ಯೋಜನೆಯಿಂದ ರಾಜ್ಯಕ್ಕಿಂತ ತಮಿಳುನಾಡಿಗೆ ಹೆಚ್ಚು ಲಾಭವಿದೆ. ಒಂದೊಮ್ಮೆ ಕೆಆರ್‌ಎಸ್‌ನಲ್ಲಿ ನೀರು ಖಾಲಿಯಾದರೆ, ಮೇಕೆದಾಟಿನಿಂದ ಕುಡಿಯಲು ನೀರು ಬಿಡಬಹುದು,'' ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ