ಆ್ಯಪ್ನಗರ

ಖಾಸಗಿ ಕನ್ನಡ ಶಾಲೆಗಳಿಗೂ ಬಿಸಿಯೂಟ: ಎಸ್ . ಸುರೇಶ್ ಕುಮಾರ್

ಕನ್ನಡ ಶಾಲೆಗಳನ್ನು ಮತ್ತಷ್ಟು ಬೆಳೆಸಲು ಸರಕಾರ ಈ ಆಲೋಚನೆ ಮಾಡಿದೆ.

Vijaya Karnataka 23 Oct 2019, 7:35 am
ಬೆಂಗಳೂರು: ಅನುದಾನರಹಿತ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೂ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ವಿಸ್ತರಿಸಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.
Vijaya Karnataka Web Mid day meals


ಮುಂದಿನ ವರ್ಷದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಬಿಸಿಯೂಟ

''ವರ್ಷದಿಂದ ವರ್ಷಕ್ಕೆ ಇಂಗ್ಲಿಷ್‌ ಮಾಧ್ಯಮಕ್ಕೆ ಸೇರುವ ಮಕ್ಕಳ ಸಂಖ್ಯೆ ಏರುತ್ತಿದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿಯುತ್ತಿದೆ. ಸರಕಾರಿ ಶಾಲೆಗಳಲ್ಲಷ್ಟೇ ಕನ್ನಡ ಮಾಧ್ಯಮವಿದೆ. ಬಹುತೇಕ ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗುತ್ತಿದೆ. ಕನ್ನಡ ಶಾಲೆಗಳನ್ನು ಮತ್ತಷ್ಟು ಬೆಳೆಸಲು ಸರಕಾರ ಈ ಆಲೋಚನೆ ಮಾಡಿದೆ.

ಈ ಸಂಬಂಧ ಅಧಿಕೃತವಾಗಿ ಸದ್ಯದಲ್ಲೇ ಪ್ರಕಟಿಸುವ ನಿರೀಕ್ಷೆ ಇದೆ,'' ಎಂದು ತಮ್ಮ ಫೇಸ್‌ಬುಕ್‌ನಲ್ಲಿಬರೆದು ಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಚಿವರು ನೀಡಿಲ್ಲ.

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿನಡೆದ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಸಚಿವ ಸಂಪುಟ ಸಭೆಯಲ್ಲಿಕೈಗೊಂಡ ಈ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿದರು. ಪದವಿ ಪೂರ್ವ ಕಾಲೇಜಿನ ಮಕ್ಕಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಹಾಗೂ ನರ್ಸರಿ ಮಟ್ಟದಲ್ಲಿ ಮೂರನೇ ವಯಸ್ಸಿನ ಮಕ್ಕಳಿಗೂ ಕಲಿಕೆಗೆ ಅವಕಾಶ ಕಲ್ಪಿಸಲು ಸರಕಾರ ಉದ್ದೇಶಿಸಿದೆ ಎಂದು ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ