ಆ್ಯಪ್ನಗರ

ಮೈತ್ರಿ ಸರಕಾರದ ಕ್ಷೀರ ಕದನ: ಸಿಎಂ ಭೇಟಿಯಾದ ಮೊಯ್ಲಿ

ಭಾರತೀಯ ಸೈನ್ಯಕ್ಕೆ ಹಾಸನ ಹಾಗೂ ಕೋಲಾರ ಹಾಲು ಒಕ್ಕೂಟದಿಂದ ತಲಾ 40 ಲಕ್ಷ ಲೀಟರ್‌ ಹಾಲು ಪೂರೈಕೆಗೆ ಮಾಡುವ ಸರಕಾರದ ನಿರ್ಧಾರಕ್ಕೆ ಕಾಂಗ್ರೆಸ್‌ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸರಕಾರದ ಈ ನಿರ್ಧಾರದ ಹಿಂದೆ ಸಚಿವ ಎಚ್‌.ಡಿ.ರೇವಣ್ಣ ಅವರ ಲಾಬಿ ಇದೆ ಎಂಬ ಅಸಮಾಧಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಎದುರು ಪಕ್ಷದ ನಿಯೋಗ ತೋಡಿಕೊಂಡಿದೆ.

Vijaya Karnataka 5 Aug 2018, 7:54 am
ಬೆಂಗಳೂರು: ಭಾರತೀಯ ಸೈನ್ಯಕ್ಕೆ ಹಾಸನ ಹಾಗೂ ಕೋಲಾರ ಹಾಲು ಒಕ್ಕೂಟದಿಂದ ತಲಾ 40 ಲಕ್ಷ ಲೀಟರ್‌ ಹಾಲು ಪೂರೈಕೆಗೆ ಮಾಡುವ ಸರಕಾರದ ನಿರ್ಧಾರಕ್ಕೆ ಕಾಂಗ್ರೆಸ್‌ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸರಕಾರದ ಈ ನಿರ್ಧಾರದ ಹಿಂದೆ ಸಚಿವ ಎಚ್‌.ಡಿ.ರೇವಣ್ಣ ಅವರ ಲಾಬಿ ಇದೆ ಎಂಬ ಅಸಮಾಧಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಎದುರು ಪಕ್ಷದ ನಿಯೋಗ ತೋಡಿಕೊಂಡಿದೆ.
Vijaya Karnataka Web veerappa


ಸಂಸದ ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಕೃಷಿ ಸಚಿವ ಎನ್‌.ಎಚ್‌.ಶಿವಶಂಕರ್‌ ರೆಡ್ಡಿ, ಶಾಸಕ ಸುಧಾಕರ್‌ ಹಾಗೂ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಕಾಂಗ್ರೆಸ್‌ ಮುಖಂಡರು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಈ ಅಹವಾಲು ಸಲ್ಲಿಸಿದ್ದು, ತಕ್ಷಣ ನಿರ್ಧಾರ ಬದಲಿಸುವಂತೆ ಆಗ್ರಹಿಸಿದ್ದಾರೆ. ಇದರೊಂದಿಗೆ ಸಚಿವ ರೇವಣ್ಣ ಇತರೆ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುವ ವಿಚಾರಕ್ಕೆ ಇನ್ನೊಂದು ದೃಷ್ಟಾಂತ ಸಿಕ್ಕಿದ್ದು, ಮೈತ್ರಿ ಸರಕಾರದ ಪಾಲುದಾರ ಪಕ್ಷವಾದ ಕಾಂಗ್ರೆಸ್‌ಗೆ ತೀವ್ರ ಇರಸು ಮುರಿಸುಂಟಾಗಿದೆ.

''ಈ ಹಿಂದೆ ಕೋಲಾರ ಹಾಲು ಉತ್ಪಾದಕ ಸಂಘ (ಕೋಮಲ್‌)ದಿಂದಲೇ ಭಾರತೀಯ ಸೇನೆಗೆ ಪೂರ್ಣ ಹಾಲು ಪೂರೈಕೆಯಾಗುತ್ತಿತ್ತು. ಆದರೆ ಈಗ ಕೋಮಲ್‌ನಿಂದ ಪೂರೈಕೆಯಾಗುತ್ತಿದ್ದ ಪ್ರಮಾಣ ಕಡಿತಗೊಳಿಸಿ 40 ಲಕ್ಷ ಲೀಟರ್‌ ಹಾಲನ್ನು ಹಾಸನ ಹಾಲು ಒಕ್ಕೂಟದಿಂದ ಪೂರೈಕೆ ಮಾಡಲು ನಿರ್ದೇಶನ ನೀಡಲಾಗಿದೆ. ಇದರಿಂದ ಈ ಭಾಗದ ಹೈನು ಉತ್ಪಾದಕರಿಗೆ ನಷ್ಟವಾಗುತ್ತದೆ. ಹೀಗಾಗಿ ಮೊದಲಿನ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಒತ್ತಾಯಿಸಲಾಗಿದೆ. ಇದಕ್ಕೆ ಸಿಎಂ ಕುಮಾರಸ್ವಾಮಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ,'' ಎಂದು ಮೂಲಗಳು ತಿಳಿಸಿವೆ.

ಸಿಎಂ ಭೇಟಿ ಬಳಿಕ ಮಾತನಾಡಿದ ವೀರಪ್ಪ ಮೊಯ್ಲಿ, ''ಹಾಸನ ಹಾಲು ಒಕ್ಕೂಟ ಹಾಗೂ ಕೋಮಲ್‌ ಮಧ್ಯೆ ಪೈಪೋಟಿಯಿಲ್ಲ. ಈ ಹಿಂದೆ ರೇವಣ್ಣ ಕೆಎಂಎಫ್‌ ಅಧ್ಯಕ್ಷರಾಗಿದ್ದರು. ಈಗ ಹಾಸನ ಒಕ್ಕೂಟಕ್ಕೆ ಮಾತ್ರ ಅಧ್ಯಕ್ಷರಾಗಿದ್ದಾರೆ. ನಮ್ಮ ಡೈರಿಗೆ ಒಳಿತಾಗಲಿ ಎಂದು ಅವರು ಬಯಸುವಂತೆ ನಮ್ಮ ಒಕ್ಕೂಟಕ್ಕೆ ಒಳ್ಳೆಯದಾಗಲಿ ಎಂದು ನಾವು ಬಯಸುತ್ತೇವೆ,''ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ