ಆ್ಯಪ್ನಗರ

ಪಠ್ಯ ಕ್ರಮದಲ್ಲಿ ಟಿಪ್ಪು ಬದಲು, ಕಲಾಂ, ಶಿಶುನಾಳ ಷರೀಫ್‌, ಗಫಾರ್‌ ಖಾನ್‌ ವಿಷಯಗಳಿರಲಿ: ಸಚಿವ ಅಶೋಕ್‌

ಟಿಪ್ಪು ಜಯಂತಿ ನಂತರ ಈಗ ಟಿಪ್ಪು ಸುಲ್ತಾನ್‌ ಪಠ್ಯವನ್ನು ತೆಗೆದು ಹಾಕುತ್ತಿರುವ ಕುರಿತು ತೀವ್ರ ವಿವಾದ ಭುಗಿಲೆದ್ದಿದೆ. ಇದು ಕಾಂಗ್ರೆಸ್‌, ಬಿಜೆಪಿ ನಡುವೆ ಮಾತಿನ ಸಮರಕ್ಕೂ ನಾಂದಿ ಹಾಡಿದೆ.

Vijaya Karnataka Web 31 Oct 2019, 8:26 pm
ಬೆಂಗಳೂರು: ಪಠ್ಯ ಕ್ರಮದಲ್ಲಿ ಟಿಪ್ಪು ಸುಲ್ತಾನ್ ವಿಷಯಕ್ಕೆ ಸಂಬಂಧಿಸಿದಂತೆ ಸರಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
Vijaya Karnataka Web ಅಶೋಕ್‌
ಅಶೋಕ್‌


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಸಚಿವ ಅಶೋಕ್‌ ಮಾತನಾಡಿದರು.

ಟಿಪ್ಪು ಪಠ್ಯ ಕುರಿತು ರಚಿಸಲಾದ ಸಮಿತಿಯ ವರದಿ ನಂತರ ಶಿಕ್ಷಣ ಸಚಿವರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಪಠ್ಯದಲ್ಲಿ ಡಾ. ಎ.ಪಿ.ಜಿ. ಅಬ್ದುಲ್ ಕಲಾಂ, ಶಿಶುನಾಳ ಷರೀಫ್, ಗಡಿನಾಡ ಗಾಂಧಿ ಖಾನ್ ಅಬ್ದುಲ್ ಗಫಾರ್ ಖಾನ್‌ರಂತಹ ಮಹನೀಯರ ವಿಷಯಗಳು ಇರಬೇಕು ಎಂಬುದು ತಮ್ಮ ಅನಿಸಿಕೆ ಎಂದು ಸಚಿವರು ತಿಳಿಸಿದರು.

ಪ್ರತಿ ಜಿಲ್ಲಾ ಕೇಂದ್ರದಲ್ಲಿ ಒಂದು ವೈದ್ಯಕೀಯ ಕಾಲೇಜು ಆರಂಭಿಸುವ ನಿರ್ಧಾರ ಕೈಗೊಳ್ಳಲಾಗಿದೆ, ಈ ಪ್ರಕ್ರಿಯೆ ಮುಗಿದ ನಂತರ ತಾಲ್ಲೂಕು, ಹೋಬಳಿ ಕೇಂದ್ರಕ್ಕೆ ಕೊಡುವ ಬಗ್ಗೆ ಚರ್ಚಿಸೋಣ ಎಂದು ಸಚಿವ ಆರ್ ಅಶೋಕ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ