ಆ್ಯಪ್ನಗರ

ಸಂಪುಟ ಸರ್ಕಸ್: ಕುತೂಹಲ ಕೆರಳಿಸಿದ ರಮೇಶ್ ಜಾರಕಿಹೊಳಿ ಹಾಗೂ ಶ್ರೀರಾಮುಲು ಭೇಟಿ

ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಶ್ರೀರಾಮುಲು ಹಾಗೂ ಇತರ ಬಿಜೆಪಿ ಮುಖಂಡರು ಭೇಟಿ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ.

Vijaya Karnataka Web 25 Nov 2020, 12:11 pm
ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಗೊಂದಲ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಶ್ರೀರಾಮುಲು ಹಾಗೂ ಇತರ ಮುಖಂಡರ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.
Vijaya Karnataka Web ramesh jarakiholi and sriramulu


ಬೆಂಗಳೂರಿನ ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಸಚಿವ ಶ್ರೀರಾಮುಲು ಹಾಗೂ ಮಾಜಿ ಸಂಸದ ಪ್ರಭಾಕರ್ ಕೋರೆ, ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಬುಧವಾರ ಭೇಟಿ ನೀಡಿದ ಬಿಜೆಪಿ ಪ್ರಮುಖರ ಸಚಿವ ರಮೇಶ್ ಜಾರಕಿಹೊಳಿ ಜೊತೆಗೆ ಸುದೀರ್ಘ ಅವಧಿಯ ಮಾತುಕತೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ವಿಳಂಬ ಹಾಗೂ ಇನ್ನಿತರ ಕಾರಣಗಳಿಂದಾಗಿ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಆಪ್ತರಿಗೆ ನಿಗಮ ಮಂಡಳಿ, ಹೈಕಮಾಂಡ್‌ಗೆ ಸಡ್ಡು ಹೊಡೆದ್ರಾ ಬಿಎಸ್‌ವೈ?

ಸಂಪುಟ ವಿಸ್ತರಣೆಗೆ ಬಿಎಸ್ ಯಡಿಯೂರಪ್ಪ ಪ್ರಯತ್ನ ಪಡುತ್ತಿದ್ದರೂ ಬಿಜೆಪಿ ಹೈಕಮಾಂಡ್‌ ಒಪ್ಪಿಗೆ ಇನ್ನೂ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಇನ್ನು ಮೂರು ದಿನಗಳಲ್ಲಿ ಎಲ್ಲವೂ ಸುಖ್ಯಾಂತ್ಯವಾಗಲಿದೆ ಎಂದಿದ್ದ ಬಿಎಸ್‌ವೈ ಸದ್ಯ ಮೌನಕ್ಕೆ ಶರಣಾಗಿದ್ದಾರೆ.

ಈ ನಡುವೆ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಸಚಿರಾದ ಶಶಿಕಲಾ ಜೊಲ್ಲೆ, ಅಣ್ಣಾ ಸಾಹೇಬ ಜೊಲ್ಲೆ, ರಾಜೂಗೌಡ, ರೇಣುಕಾಚಾರ್ಯ ಸೇರಿದಂತೆ ಹಲವರು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಇದೀಗ ಶ್ರೀರಾಮುಲು ಹಾಗೂ ಇತರ ಮುಖಂಡರ ಭೇಟಿಯೂ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ