ಆ್ಯಪ್ನಗರ

ಗ್ರಾಮ ವಾಸ್ತವ್ಯ ಆಯ್ತು, ಇದೀಗ ರೈತ ವಾಸ್ತವ್ಯ! ಬಿ.ಸಿ ಪಾಟೀಲ್ ಹೊಸ ಪ್ರಯೋಗ

ಗ್ರಾಮ ವಾಸ್ತವ್ಯದ ಮಾದರಿಯಲ್ಲಿ ರೈತರ ಜೊತೆಗೆ ವಾಸ್ತವ್ಯ ಮಾಡಲು ಕೃಷಿ ಸಚಿವ ಬಿ.ಸಿ ಪಾಟೀಲ್ ನಿರ್ಧರಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಮಾಹಿತಿ ನೀಡಿದರು.

Vijaya Karnataka Web 12 Nov 2020, 5:03 pm
ಬೆಂಗಳೂರು: ರೈತರ ಕಷ್ಟ ಅರಿಯುವ ನಿಟ್ಟಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ರೈತರ ಜೊತೆಗೆ ಕಳೆಯಲು ಕೃಷಿ ಸಚಿವ ಬಿ.ಸಿ ಪಾಟೀಲ್ ನಿರ್ಧರಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನವೆಂಬರ್‌ 14 ರಂದು ಕೃಷಿ ಸಚಿವರ ಹುಟ್ಟಿದ ದಿನ. ತಮ್ಮ ಈ ಜನ್ಮದಿನವನ್ನು ರೈತರ ಜೊತೆ ಕಳೆಯಲು ನಿರ್ಧರಿಸಿರುವುದಾಗಿ ತಿಳಿಸಿದರು.

ಕಳೆದ ಏಪ್ರಿಲ್‌1 ರಿಂದಲೇ ರೈತ ವಾಸ್ತವ್ಯ ಮಾಡಬೇಕೆಂದಿದ್ದೆ ಆದರೆ ಕೋವಿಡ್ ಅಡ್ಡ ಆಯಿತು.ಈಗ ರೈತರೊಂದಿಗೊಂದು ದಿನ ಎಂಬ ವಿನೂತನ ಕಾರ್ಯಕ್ರಮವನ್ನು ನ. 14ರಿಂದ ಮಂಡ್ಯದಿಂದ ಆರಂಭಿಸುತ್ತಿದ್ದೇನೆ ಎಂದರು.

'ನಳಿನ್ ಕುಮಾರ್‌ ಹೋಂ ಮಿನಿಸ್ಟ್ರಾ? ಸಂಪತ್‌ರಾಜ್‌ನ ನಾನು ಅಡಗಿಸಿಟ್ಟಿದ್ರೆ ಬಂಧಿಸಲಿ'; ಕಟೀಲ್‌ಗೆ ಡಿಕೆಶಿ ಟಾಂಗ್‌

ರೈತರಿಗೆ ಆತ್ಮಸ್ಥೈರ್ಯ ತುಂಬುವುದು, ಸಮಗ್ರ ಕೃಷಿ, ಕೃಷಿ ರೈತೋದ್ಯಮ ಕುರಿತು ಉತ್ಪಾದನಾ ವೆಚ್ಚ ಕುರಿತು ಮಾಹಿತಿ ನೀಡಿ ಹುರಿದುಂಬಿಸುವುದು ಹಾಗೂ ರೈತರ ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಮೂಲದಿಂದ ಅರಿಯಲು ಕೋಲಾರ ಕೃಷಿ ಮಾದರಿಯಾಗುವಂತೆ ಮನೋಸ್ಥೈರ್ಯ ತುಂಬುವ ಉದ್ದೇಶ ಈ ಕಾರ್ಯಕ್ರಮದಾಗಿದೆ.ಮಾದರಿ ರೈತರ ಭೇಟಿ ಅವರ ಅನುಭವ ಬೇರೆಯವರಿಗೆ ಮಾದರಿಯಾಗುವಂತೆ ಮಾಡುವುದು ಇದರ ಉದ್ದೇಶ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಕಾರ್ಯಕ್ರಮದಲ್ಲಿ ಎಲ್ಲಾ ತಾಲೂಕುಗಳ ರೈತ ಮುಖಂಡರು ಪ್ರಗತಿಪರರು ಕೃಷಿ ಅಧಿಕಾರಿಗಳು ಕೂಡ ಭಾಗಾವಹಿಸಲಿದ್ದಾರೆ. ಪ್ರತಿ ತಿಂಗಳು 2 ಜಿಲ್ಲೆ ಕಾರ್ಯಕ್ರಮ ಮಾಡಿ ಬೆಳಿಗ್ಗೆ 7ರಿಂದ ರೈತರೊಂದಿಗೆ ಇರುವ ಕಾರ್ಯಕ್ರಮ ಇದಾಗಿದೆ.ಇದೆಲ್ಲ ಆದ ಬಳಿಕ ಸಮಗ್ರ ವರದಿಯನ್ನು ಮುಖ್ಯಮಂತ್ರಿಗೆ ನೀಡಿ ಕೃಷಿ ಇಲಾಖೆಯಲ್ಲಿ ಹೊಸ ಬದಲಾವಣೆ ಮಾಡಲಾಗುವುದು ಎಂದರು.

ರೈತರಿಗೆ ತಾತ್ಕಲಿಕ ಸಮಸ್ಯೆಗಳಿಗೆ ಪರಿಹಾರ ‌ನೀಡುವುದಕ್ಕಿಂತ ಶಾಶ್ವತ ಪರಿಹಾರ ನೀಡಬೇಕು‌.ಎಲ್ಲಾ ಜಿಲ್ಲೆಗಳನ್ನು ಈಗ ಮತ್ತೆ ಸುತ್ತಿ ರೈತರ ಸಮಸ್ಯೆಯನ್ನು ಅರಿಯಲು ಅಧ್ಯಯನ ಈಗ ಮತ್ತೊಂದು ಪ್ರಯತ್ನವಾಗಿದೆ.ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೂಡ ಎಲ್ಲಾ ಜಿಲ್ಲೆಗಳನ್ನು ಸುತ್ತಿ ಲಾಕ್ಡೌನ್ ಸಂದರ್ಭದಲ್ಲಿ ರೈತರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಲಾಯಿತು.ಪ್ರತಿ ತಿಂಗಳು ಕನಿಷ್ಠ ಎರಡು ಜಿಲ್ಲೆಗಳಲ್ಲಿ ಭೇಟಿ ನೀಡುವ ಉದ್ದೇಶವಿದೆ‌ ಎಂದು ಸಚಿವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ