ಆ್ಯಪ್ನಗರ

ವಿಜಯಾನಂದ ಕಾಶಪ್ಪನವರ್ ಕಪಿಮುಷ್ಟಿಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ: ಸಿಸಿ ಪಾಟೀಲ್‌ ಆರೋಪ

ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಈಗ ರಾಜಕೀಯ ರೂಪ ಪಡೆದಿದೆ. ಸಚಿವ ಸಿಸಿ ಪಾಟೀಲ್‌ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿಜಯಾನಂದ ಕಾಶಪ್ಪನವರ್‌ ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು.

Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 22 Feb 2021, 2:54 pm

ಹೈಲೈಟ್ಸ್‌:


  • ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ವಿರುದ್ಧ ಸಚಿವ ಸಿಸಿ ಪಾಟೀಲ್‌ ವಾಗ್ದಾಳಿ
  • ವಿಜಯಾನಂದ ಕಾಶಪ್ಪನವರ್ ಕಪಿಮುಷ್ಟಿಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಂದು ಆರೋಪ
  • ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಯತ್ನಾಳ್‌ರಿಂದ ಜನರನ್ನು ದಾರಿ ತಪ್ಪಿಸುವ ಕೆಲಸ ಎಂದು ಕಿಡಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web CC PATIL
ಪಂಚಮಸಾಲಿ 2ಎ ಮೀಸಲಾತಿ ಕುರಿತ ಸುದ್ದಿಗೋಷ್ಠಿಯಲ್ಲಿ ಸಚಿವ ಸಿಸಿ ಪಾಟೀಲ್‌ ಮಾತನಾಡಿದರು
ಬೆಂಗಳೂರು: ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ತಮ್ಮ ಸ್ವಾರ್ಥ ಸಾಧನೆಗಾಗಿ ಹೋರಾಟವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಚಿವ ಸಿಸಿ ಪಾಟೀಲ್‌ ಆರೋಪಿಸಿದರು.
ವಿಧಾನಸೌಧದಲ್ಲಿ ಪಂಚಮಸಾಲಿ ಸಮುದಾಯದ ಸಚಿವರು, ಶಾಸಕರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಲು ಪಾದಯಾತ್ರೆ ನಡೆಸಿದ್ದಾರೆ. ಹೋರಾಟಕ್ಕೆ ಸಮಾಜದ ಜನರಿಂದ ಉತ್ತಮ ಬೆಂಬಲವೂ ಸಿಕ್ಕಿದೆ. ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದ ಎಂದರು.

ಆದರೆ, ಕೆಲವು ವ್ಯಕ್ತಿಗಳು ತಮ್ಮ ಸ್ವಾರ್ಥ ಸಾಧನೆಗಾಗಿ ಹೋರಾಟವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಸಮಾವೇಶದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಮೀಸಲಾತಿ ನೀಡಬೇಕಾದರೆ ಸಂವಿಧಾನದ ಅಡಿಯಲ್ಲಿ ಹಿಂದುಳಿದ ವರ್ಗಗಳ ಆಯೋಗ ಶಿಫಾರಸು ಮಾಡಬೇಕು. ಆದರೆ, ಅನವಶ್ಯಕವಾಗಿ ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಯತ್ನಾಳ್‌ ಮಾಡುತ್ತಿದ್ದಾರೆ ಎಂದರು.

ಪಂಚಮಸಾಲಿ ಸಮುದಾಯದ ಮನವಿಯನ್ನು ಅಧ್ಯಯನ ಮಾಡಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಿಎಂ ಯಡಿಯೂರಪ್ಪ ನೀಡಿದ್ದಾರೆ. ಆದರೂ ಕೂಡ ಪ್ರಚೋದನಕಾರಿ ಭಾಷಣವನ್ನು ಬಸನಗೌಡ ಪಾಟೀಲ್‌ ಯತ್ನಾಳ್ ಹಾಗೂ ಮಾಜಿ‌ ಶಾಸಕ ವಿಜಯಾನಂದ ಕಾಶಪ್ಪನವರ್ ಮಾಡಿದ್ದಾರೆ. ಇದು ಸಮುದಾಯಕ್ಕೆ ಕಳಂಕ ತರುವ ಪ್ರಯತ್ನ ಎಂದು ಸಿಸಿ ಪಾಟೀಲ್ ಆರೋಪಿಸಿದರು.
ಯತ್ನಾಳ್‌ರಿಂದ ಕಾಂಗ್ರೆಸ್ 'ಬಿ' ಟೀಂ ಕೆಲಸ‌..! ಧರಣಿ ಕೈಬಿಡುವಂತೆ ಸ್ವಾಮೀಜಿಗಳಿಗೆ ನಿರಾಣಿ ಮನವಿಕಾಂಗ್ರೆಸ್ ಸರ್ಕಾರ ಇದ್ದಾಗ ಪಂಚಮಸಾಲಿ ಸಮಾಜಕ್ಕೆ ಏನು ಕೊಟ್ಟಿದ್ದಾರೆ ? ಮುಖ್ಯಮಂತ್ರಿಗಳು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಲು ಪ್ರಯತ್ನ ಮಾಡಿದ್ದಾರೆ. ‌ಆದರೆ. ಕೆಲವೊಂದು ತಾಂತ್ರಿಕ ಸಮಸ್ಯೆ ಇದೆ ಎಂದ ಅವರು, ಬಸವಜಯ ಮೃತ್ಯುಂಜಯ ಸ್ವಾಮೀಜಿಯನ್ನು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿಗಳೇ ನಿಮ್ಮ ನಾಟಕ ಕಂಪನಿ ಬಂದ್‌ ಮಾಡಿ: ಬಿಎಸ್‌ವೈ ವಿರುದ್ಧ ಯತ್ನಾಳ್‌ ಆಕ್ರೋಶ1994ರಲ್ಲಿ ಸುಪ್ರೀಂ ಕೋರ್ಟ್ ಹಿಂದುಳಿದ ವರ್ಗಕ್ಕೆ ಯಾವುದೇ ಸಮುದಾಯವನ್ನು ಸೇರಿಸುವ ಮೊದಲು ಹಿಂದುಳಿದ ವರ್ಗಗಳ ಆಯೋಗ ಶಿಫಾರಸು ನೀಡಬೇಕು ಎಂಬ ಆದೇಶ ನೀಡಿದೆ. ಅದರಂತೆ ನಾವೂ ನಡೆಯಬೇಕಿದೆ ಎಂದ ಸಿಸಿ ಪಾಟೀಲ್‌, ಸಿಎಂ ಬಗ್ಗೆ ಹೇಳಿಕೆ ಕೊಡುವುದು ಯತ್ನಾಳ್‌ಗೆ ರೂಢಿಯಾಗಿದೆ. ಸಮಾವೇಶದಲ್ಲಿ ಸಿಎಂ ಹಾಗೂ ಅವರ ಪುತ್ರನ ಹೆಸರು ತರುವುದು ಖಂಡನೀಯ ಎಂದರು.
ಪಂಚಮಸಾಲಿ ಸಮಾವೇಶ ಬೆನ್ನಲ್ಲೇ ದಿಲ್ಲಿಗೆ ಯತ್ನಾಳ್‌..! ಶಿಸ್ತುಕ್ರಮಕ್ಕೆ ಮುಂದಾಯ್ತಾ ಹೈಕಮಾಂಡ್‌..?ಒಟ್ಟು ಸಮುದಾಯದ ಅಭಿಪ್ರಾಯ ಪಡೆದು ಮೃತ್ಯುಂಜಯ ಸ್ವಾಮೀಜಿ ಮುಂದುವರಿಯಬೇಕು. ಉಪವಾಸ ಸತ್ಯಾಗ್ರಹವನ್ನು ಕೈ ಬಿಡಬೇಕು, ಮಾತುಕತೆಗೆ ಬರಬೇಕು. ಕೆಲವು ಘಟನೆಗಳು ದುರದೃಷ್ಟಕರ, ಸಮಾಜದ ಹಿತ ಕಾಪಾಡಲು ಬದ್ಧರಿದ್ದೇವೆ. ಕಾಲಾವಕಾಶ ನೀಡಿ ಎಂದು ಸಿಸಿ ಪಾಟೀಲ್‌ ಮನವಿ ಮಾಡಿದರು. ಇನ್ನು, ಸದುದ್ದೇಶದಿಂದ ಆರಂಭವಾದ ಮೀಸಲಾತಿ ಹೋರಾಟ ಸಮಾವೇಶ ಅದೇ ಸದುದ್ದೇಶದಿಂದ ಅಂತಿಮಗೊಂಡಿಲ್ಲ ಎಂದು ಬೇಸರವನ್ನು ಸಚಿವರು ವ್ಯಕ್ತಪಡಿಸಿದರು.
'2ಎ'ಗಾಗಿ ಪಂಚಮಸಾಲಿ ಹೋರಾಟ ಅಚಲ; ಮೀಸಲು ಸಿಗುವವರೆಗೂ ಚಳುವಳಿಗೆ ನಿರ್ಧಾರ
ಸುದ್ದಿಗೋಷ್ಠಿಯಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಮಹೇಶ್ ಕುಮಠಳ್ಳಿ, ಸಂಸದ ಕರಡಿ ಸಂಗಣ್ಣ, ಮೋಹನ್ ಲಿಂಬೀಕಾಯಿ, ವಿರೂಪಾಕ್ಷಪ್ಪ ಬಳ್ಳಾರಿ, ಅರುಣ್ ಕುಮಾರ್ ಸೇರಿ ಅನೇಕರು ಇದ್ದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ