ಆ್ಯಪ್ನಗರ

ಭ್ರಷ್ಟಾಚಾರ ನಡೆಸದಿದ್ದರೆ ಯಾಕೆ ಹೆದರಬೇಕು - ಸಿದ್ದರಾಮಯ್ಯಗೆ ಸಿಟಿ ರವಿ ಪ್ರೆಶ್ನೆ

ಮಾಜಿ ಸಿಎಂ ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ ನಡೆದಿದೆ ಎನ್ನಲಾದ ಐದು ಭ್ರಷ್ಟಾಚಾರ ಹಗರಣವನ್ನು ಸಿಎಂ ಯಡಿಯೂರಪ್ಪ ತನಿಖೆಗೆ ಆದೇಶ ನೀಡಿದ್ದು ಇದು ಬೆಟ್ಟ ಅಗೆದು ಇಲಿ ಹಿಡಿಯುವ ಪ್ರಯತ್ನ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಸಿಟಿ ರವಿ ಭ್ರಷ್ಟಾಚಾರ ನಡೆಸದಿದ್ದರೆ ಯಾಕೆ ಹೆದರಬೇಕು ಎಂದು ಪ್ರಶ್ನಿಸಿದ್ದಾರೆ.

Vijaya Karnataka Web 10 Sep 2019, 10:02 pm
ಬೆಂಗಳೂರು : ತಮ್ಮ ಅವಧಿಯ ಯೋಜನೆಗಳಲ್ಲಿ ಭ್ರಷ್ಟಾಚಾರ ನಡೆಯದಿದ್ದರೆ ಯಾಕಾಗಿ ಹೆದರಬೇಕು ಎಂದು ಸಚಿವ ಸಿಟಿ ರವಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಕಾಲೆಳೆದ ಸಿಟಿ ರವಿ, ಯಾರು ಭ್ರಷ್ಟಾಚಾರ ಮಾಡುತ್ತಾರೋ ಅವರಿಗೆ ಭಯ ಇರುತ್ತೆ. ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವುದು ತಪ್ಪೇ ಎಂದಿದ್ದಾರೆ.
Vijaya Karnataka Web ct ravi





ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 5 ಹಗರಣಗಳನ್ನು ತನಿಖೆಗೆ ವಹಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ. ಈ ಹಿಂದೆ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ಹಗರಣ ಸಂಬಂಧ ದಾಖಲೆ ಸಹಿತ ಸಿಎಂ ಯಡಿಯೂರಪ್ಪಗೆ ದೂರು ನೀಡಿದ್ದರು. ದೂರಿನನ್ವಯ ಸಿಎಂ, ತನಿಖೆಗೆ ಆದೇಶ ಹೊರಡಿಸಿದ್ದು, ಎರಡು ತಿಂಗಳೊಳಗೆ ಸಮಗ್ರ ತನಿಖಾ ವರದಿಯನ್ನು ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಸಿಎಂ ಆದೇಶದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ನಮ್ಮ ಸರಕಾರದ ಅವಧಿಯ 5 ಯೋಜನೆಗಳನ್ನು ಯಡಿಯೂರಪ್ಪ ಅವರು ತನಿಖೆಗೆ ಒಳಪಡಿಸುತ್ತಿರುವುದು ಬಹಳ ಸಂತೋಷ. ಬೆಟ್ಟ ಅಗೆದು ಇಲಿ ಹಿಡಿಯುದಿದ್ದರೆ ನಾನ್ಯಾಕೆ ಬೇಡ ಎನ್ನಲಿ. ಇದು ತಮ್ಮ ಆಡಳಿತ ವೈಫಲ್ಯವನ್ನು ಮುಚ್ಚಿಹಾಕಲು ಪ್ರಾರಂಭಿಸಿರುವ ಹೊಸ ನಾಟಕ ಎಂದಿದ್ದರು.


ಸಿದ್ದರಾಮಯ್ಯ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಸಚಿವ ಸಿಟಿ ರವಿ ತನಿಖೆ ನಡೆಸುವುದೇ ಇಲಿ ಹಿಡಿಯುವುದು ಎಂದು ನೀವು ಹೇಳಿದರೆ ಅದಕ್ಕೆ ಏನು ಹೇಳಬೇಕು ಹೇಳಿ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ