ಆ್ಯಪ್ನಗರ

ವಿಪ್ ಕಾಳಗ: ಬಿಎಸ್‌ವೈ ಹೇಳಿಕೆಗೆ ದೋಸ್ತಿ ನಾಯಕರ ಆಕ್ಷೇಪ

ಒಂದು ವರ್ಷ ಮೂರು ತಿಂಗಳು ಕಳೆದಿರುವ ರಾಜ್ಯದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರಕ್ಕೆ ಅಗ್ನಿ ಪರೀಕ್ಷೆ ಎದುರಾಗಿದೆ.

Vijaya Karnataka Web 18 Jul 2019, 3:01 pm
ಬೆಂಗಳೂರು: ಸಮ್ಮಿಶ್ರ ಸರಕಾರದ 15 ಅತೃಪ್ತ ಶಾಸಕರು ಸದನಕ್ಕೆ ಹೋಗಲೇಬೇಕು ಎಂದು ಒತ್ತಾಯಿಸುವಂತಿಲ್ಲ ಎಂದು ಎರಡು ದಿನ ಚರ್ಚೆ ಮಾಡಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ವಿಪ್ ಬಗ್ಗೆಯೂ ಪ್ರಸ್ತಾಪ ಮಾಡಿದೆ ಎಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳುತ್ತಿದ್ದಂತೆ ಸಚಿವ ಡಿ ಕೆ ಶಿವಕುಮಾರ್ ಸೇರಿದಂತೆ ದೋಸ್ತಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು.
Vijaya Karnataka Web Bsy


ಈ ರೀತಿ ತಪ್ಪು ಮಾಹಿತಿ ನೀಡುವ ಮೂಲಕ ದೇಶವನ್ನು ತಪ್ಪು ದಾರಿಗೆ ಎಳೆಯುತ್ತಿದ್ದೀರಿ ಎಂದು ದೋಸ್ತಿ ನಾಯಕರು ಚಕಾರಾ ಎತ್ತುತ್ತಿದ್ದಂತೆ ಬಿಎಸ್‌ವೈ ತಮ್ಮ ಹೇಳಿಕೆಯನ್ನು ಹಿಂಪಡೆದರು.

ವಿಪ್ ಬಗ್ಗೆ ನಿರ್ಧಾರ ಆಗುವವರೆಗೂ ವಿಶ್ವಾಸ ಮತಯಾಚನೆ ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪೀಕರ್ ರಮೇಶ್ ಕುಮಾರ್ ಬಳಿ ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ