ಆ್ಯಪ್ನಗರ

ಹಾಸನ: ರೇವಣ್ಣ ಮನೆಯಲ್ಲಿ ಸಚಿವ ಗೋಪಾಲಯ್ಯ ಊಟ, ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಎಪಿಎಂಸಿ ಚುನಾವಣೆಯಲ್ಲಿ ತಮ್ಮ ಸ್ವಂತ ಅತ್ತೆ ಜೆಡಿಎಸ್‌ ಅಭ್ಯರ್ಥಿಯಾಗಿದ್ದರೂ, ಅವರ ವಿರುದ್ಧವೇ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಸೆಣಸಾಟ ನಡೆಸಿ ಪಕ್ಷನಿಷ್ಠೆ ಪ್ರದರ್ಶಿಸಿದ್ದ ಪ್ರೀತಂ ಜೆ.ಗೌಡ ಇದೀಗ ಸಚಿವ ಗೋಪಾಲಯ್ಯ ನಡೆ ವಿರುದ್ಧ ಮುನಿಸಿಕೊಂಡಿದ್ದಾರೆ.

Vijaya Karnataka Web 22 Aug 2020, 12:54 am
ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಹೊಳೆನರಸೀಪುರ ಮನೆ ಔತಣಕೂಟಕ್ಕೆ ತೆರಳಿದ್ದ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ವಿರುದ್ಧ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.
Vijaya Karnataka Web ಬಿಜೆಪಿ
ಬಿಜೆಪಿ


ಜೆಡಿಎಸ್‌ ವಿರುದ್ಧ ನಿರಂತರ ಹೋರಾಟ ಮಾಡಿಕೊಂಡು ಬಂದು ಹಾಸನ ಕ್ಷೇತ್ರದಲ್ಲಿಬಿಜೆಪಿ ಬಾವುಟ ಹಾರಿಸಿರುವುದನ್ನು ಲೆಕ್ಕಿಸದ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ಶಾಸಕ ಎಚ್‌.ಡಿ.ರೇವಣ್ಣ ಹಾಗೂ ಶಾಸಕರೊಂದಿಗೆ ಸಖ್ಯ ಬೆಳೆಸಿರುವುದು ಶಾಸಕ ಪ್ರೀತಂ ಜೆ.ಗೌಡ ಕೋಪಕ್ಕೆ ಕಾರಣವಾಗಿದೆ.

ಇದೇ ಕಾರಣಕ್ಕೆ ಸಚಿವರು ಹೇಮಾವತಿ ಜಲಾಶಯಕ್ಕೆ ಬಾಗಿನ ಅರ್ಪಣೆ ವೇಳೆ ಶಾಸಕ ಪ್ರೀತಂ ಜೆ. ಗೌಡ ಗೈರಾಗುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಎಪಿಎಂಸಿ ಚುನಾವಣೆಯಲ್ಲಿ ತಮ್ಮ ಸ್ವಂತ ಅತ್ತೆ ಜೆಡಿಎಸ್‌ ಅಭ್ಯರ್ಥಿಯಾಗಿದ್ದರೂ, ಅವರ ವಿರುದ್ಧವೇ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಸೆಣಸಾಟ ನಡೆಸಿ ಪಕ್ಷನಿಷ್ಠೆ ಪ್ರದರ್ಶಿಸಿದ್ದ ಪ್ರೀತಂ ಜೆ.ಗೌಡ ಇದೀಗ ಸಚಿವ ಗೋಪಾಲಯ್ಯ ನಡೆ ವಿರುದ್ಧ ಮುನಿಸಿಕೊಂಡಿದ್ದಾರೆ. ಈ ವಿಷಯ ಸಚಿವ ಗೋಪಾಲಯ್ಯ ಗಮನಕ್ಕೂ ಬಂದಿದ್ದು, ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಕೆ.ಆರ್‌.ಪೇಟೆ ಉಪ ಚುನಾವಣೆಯಲ್ಲಿ ಕೊಟ್ಟ ಜವಾಬ್ದಾರಿ ಸಮರ್ಥ ನಿರ್ವಹಣೆ, ಹಾಸನ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ಪ್ರತಿ ಹಂತದಲ್ಲೂ ತಮ್ಮ ಸಾಮರ್ಥ್ಯ ಪ್ರದರ್ಶಿಸುವ ಮೂಲಕ ಹೈಕಮಾಂಡ್‌ನಲ್ಲಿವರ್ಚಸ್ಸು ವೃದ್ಧಿಸಿಕೊಂಡಿರುವ ಪ್ರೀತಂ ಜೆ ಗೌಡ ಜಿಪಂ, ಗ್ರಾಪಂ ಚುನಾವಣೆಯಲ್ಲಿಜೆಡಿಎಸ್‌ಗೆ ತಕ್ಕ ಟಾಂಗ್‌ ನೀಡಲು ಕಾರ್ಯತಂತ್ರ ರೂಪಿಸುತ್ತಿದ್ದರು.

ಇಂತಹ ಸಂದರ್ಭದಲ್ಲಿ ಸಚಿವ ಗೋಪಾಲಯ್ಯ ಜೆಡಿಎಸ್‌ ಜತೆ ಹಳೇ ಸಂಬಂಧವನ್ನು ಮುಂದುವರಿಸಲು ಮುಂದಾಗಿದ್ದಾರೆ ಎಂಬ ಸಂಶಯದ ನೋಟಕ್ಕೆ ಪುಷ್ಠಿ ದೊರಕಿಸುವಂತೆ ಪ್ರತಿಯೊಂದು ನಿರ್ಧಾರ ಕೈಗೊಳ್ಳುವ ಸಂದರ್ಭದಲ್ಲಿಶಾಸಕ ರೇವಣ್ಣ ಸಾಹೇಬ್ರು ಹೇಳಿದಂತೆ ಎಂಬ ಸಚಿವರ ಉದ್ಗಾರ ಶಾಸಕರ ಕೋಪ ನೆತ್ತಿಗೇರಲು ಕಾರಣವಾಗಿದೆ ಎಂಬ ಸಂಗತಿ ಬಿಜೆಪಿ ವಲಯದಲ್ಲಿಬಹು ಚರ್ಚಿತ ಸಂಗತಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ