ಆ್ಯಪ್ನಗರ

ಯತ್ನಾಳ್ ವಿರುದ್ಧ ನೋಟಿಸ್‌ ನೀಡದೆ ಕ್ರಮ ಕೈಗೊಳ್ಳಿ! ಕೆ.ಎಸ್ ಈಶ್ವರಪ್ಪ ಆಗ್ರಹ

ಸಿಎಂ ಬಿಎಸ್‌ವೈ ವಿರುದ್ಧ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ನೋಟಿಸ್‌ ನೀಡದೆ ಪಕ್ಷದಿಂದ ಉಚ್ಚಾಟನೆ ಮಾಡಬೇಕಂತೆ. ಹೀಗಂತ ಹೇಳಿದ್ದು ಬೇರಾರು ಅಲ್ಲ, ಬದಲಾಗಿ ಸಚಿವ ಕೆ.ಎಸ್ ಈಶ್ವರಪ್ಪ

Vijaya Karnataka Web 21 Oct 2020, 4:09 pm
ಬೆಂಗಳೂರು: ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ನಾಯಕತ್ವ ಬದಲಾವಣೆ ಕುರಿತಾಗಿ ಬಹಿರಂಗ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನೋಟಿಸ್‌ ನೀಡದೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
Vijaya Karnataka Web KS ESHWARAPPA


ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಬಿಎಸ್‌ವೈ ವಿರುದ್ಧ ಇಂತಹ ಹೇಳಿಕೆ ನೀಡಿರುವ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ನೋಟಿಸ್‌ ನೀಡದೆ ಕೂಡಲೇ ಕ್ರಮ ಜರಗಿಸಬೇಕು ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ! ಅಧಿಕೃತ ಟ್ವೀಟ್ ಮೂಲಕ ಬಿಜೆಪಿ ಸ್ಪಷ್ಟನೆ

ಯತ್ನಾಳ್ ಅವರನ್ನು ಕೂಡಲೇ ಬಿಜೆಪಿಯಿಂದ ಹೊರಹಾಕಬೇಕು, ಅವರು ನೀಡಿರುವ ಹೇಳಿಕೆ ಮೂರ್ಖತನದ ಹೇಳಿಕೆಯಾಗಿದೆ. ಈ ನಿಟ್ಟಿನಲ್ಲಿ ಯತ್ನಾಳ್ ವಿರುದ್ಧ ಕ್ರಮ ಅಗತ್ಯ. ಇದರಲ್ಲಿ ಯಾವುದೇ ಅನುಮಾನವೇ ಬೇಡ ಎಂದರು.

ಯತ್ನಾಳ್ ಹೇಳಿಕೆ ಅಶಿಸ್ತು, ಮೂರು ವರ್ಷ ಬಿಎಸ್‌ವೈ ಸಿಎಂ ಎಂದ ಬಿ.ಸಿ.ಪಾಟೀಲ್

ಕೆಲವರಿಗೆ ಬಾಯಿ ಚಪಲವಿದೆ ಅದಕ್ಕೆ ಇಂತಹ ಹೇಳಿಕೆ ನೀಡುತ್ತಾರೆ. ಅಂತವರನ್ನು ಉಚ್ಚಾಟನೆ ಮಾಡಬೇಕು ಎಂದು ರಾಜ್ಯಾಧ್ಯಕ್ಷರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ. ಸೋಮವಾರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಜಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಬಿಎಸ್‌ ಯಡಿಯೂರಪ್ಪ ಇನ್ನು ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವುದಿಲ್ಲ, ವರಿಷ್ಠರು ಕೂಡಾ ಅವರ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದಿದ್ದರು.

ಯತ್ನಾಳ್ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಅವರು ಈ ರೀತಿಯ ಹೇಳಿಕೆ ನೀಡುವುದು ಇದೇ ಮೊದಲಲ್ಲ. ಬಿಜೆಪಿ ಸರ್ಕಾರ ರಚನೆ ಆದ ಬಳಿಕ ಪದೇ ಪದೇ ತಮ್ಮ ಅಸಮಾಧಾನವನ್ನು ಅವರು ಬಹಿರಂಗವಾಗಿಯೇ ಹೊರಹಾಕುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ