ಆ್ಯಪ್ನಗರ

ಲಾಕ್‌ಡೌನ್ ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ, ನಿತಿನ್ ಗಡ್ಕರಿಗೆ ಲಕ್ಷ್ಮಣ ಸವದಿ ಬರೆದ ಪತ್ರದಲ್ಲೇನಿದೆ?

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಲಿರುವ ನೂತನ ಮಾರ್ಗಸೂಚಿಗಳಲ್ಲಿ ಸಾರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವೊಂದು ವಿಚಾರಗಳನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಪತ್ರವನ್ನು ಬರೆದಿದ್ದಾರೆ.

Vijaya Karnataka Web 17 May 2020, 12:22 pm
ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಕರ್ನಾಟಕ ಸಾರಿಗೆ ಸಂಸ್ಥೆ ಸಂಕಷ್ಟದಲ್ಲಿದ್ದು ಮುಂದಿನ ಲಾಕ್‌ಡೌನ್ ಮಾರ್ಗಸೂಚಿಯನ್ನು ಪ್ರಕಟಿಸುವಾಗ ಕೇಂದ್ರ ಸರ್ಕಾರ ಸಾರಿಗೆ ಸಂಚಾರ ಕುರಿತಾಗಿ ಕೆಲವೊಂದು ಸಡಿಲಿಕೆಗಳನ್ನು ನೀಡಬೇಕು ಎಂದು ಒತ್ತಾಯಿಸಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರವನ್ನು ಬರೆದಿದ್ದಾರೆ.
Vijaya Karnataka Web laxman savadi meeting


ಲಾಕ್‌ಡೌನ್ ಪರಿಣಾಮವಾಗಿ ಕಳೆದ ಎರಡು ತಿಂಗಳಿಂದ ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯ ನಾಲ್ಕು ಸಾರಿಗೆ ವಿಭಾಗಗಳಲ್ಲಿ ಸಂಚರಿಸುವ ಬಸ್‌ಗಳು ಸ್ಥಗಿತಗೊಂಡಿವೆ. ಇದರಿಂದಾಗಿ ಇಲಾಖೆಗೆ ಸುಮಾರು 1,600 ಕೋಟಿ ನಷ್ಟ ಸಂಭವಿಸಿದೆ.

ಸಂಕಷ್ಟಗಳಿಗೆ ಹೊಂದಿಕೊಂಡು ಬದುಕುವುದು ಹೇಗೆ? ಜೀವನಪೂರ್ತಿ ದಿಗ್ಬಂಧನದಲ್ಲಿರುವ ಈತ ಕಲಿಸಿದ ಪಾಠ

ಲಾಕ್‌ಡೌನ್ ನಡುವೆಯೂ ಬೆಂಗಳೂರು ನಗರದಲ್ಲಿ ಕೆಲವೊಂದು ಬಸ್‌ಗಳ ಸಂಚಾರವಿದ್ದು ಕೋವಿಡ್‌-19 ನಿಯಮಾವಳಿಗಳ ಪ್ರಕಾರ ಸಂಚಾರ ನಡೆಸುತ್ತದೆ. ಹೆಚ್ಚಿನ ಸಂಖ್ಯೆಯ ಪ್ರಯಾಣಿಕರನ್ನು ಬಸ್‌ಗಳಲ್ಲಿ ಪ್ರಯಾಣ ಮಾಡದಂತೆ ಸರ್ಕಾರದ ಮಾರ್ಗಚೂಚಿಯೂ ಇದೆ. ಬಸ್‌ಗಳಲ್ಲಿ ಕಡ್ಡಾಯ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಸದ್ಯ ಲಾಕ್‌ಡೌನ್ ಸಡಿಲಗೊಂಡಿದ್ದು ಸೋಮವಾರದಿಂದ 4.0 ಲಾಕ್‌ಡೌನ್ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಲಿದೆ. ಈ ಸಂದರ್ಭದಲ್ಲಿ ಸರ್ಕಾರಿ ಸಾರಿಗೆ ಸಂಚಾರಕ್ಕೆ ಅನುವು ಮಾಡಿಕೊಡುವ ಸಾಧ್ಯತೆ ಇದೆ. ಆದರೆ ಈಗಾಗಲೇ ಜಾರಿಯಲ್ಲಿರುವ ಮಾರ್ಗಸೂಚಿಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಬೇಕು ಎಂದು ಸಚಿವರು ವಿನಂತಿಸಿದ್ದಾರೆ.

ಬಸ್‌ಗಳಲ್ಲಿ ಕಡ್ಡಾಯ ಸಾಮಾಜಿಕ ಅಂತರ ಕಾಪಾಡುವ ಹಿಂದಿನ ಮಾರ್ಗಸೂಚಿಗಳ ಪ್ರಕಾರ ಹೋದರೆ ಹೆಚ್ಚಿನ ಸಂಖ್ಯೆಯ ಬಸ್‌ ಹಾಗೂ ಸಿಬ್ಬಂದಿ ಅವಷ್ಯಕತೆ ಇದೆ. ಸದ್ಯದ ಸಂದರ್ಭದಲ್ಲಿ ಇದು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಸಿಬ್ಬಂದಿಗೆ ಕಡ್ಡಾಯ ಮಾಸ್ಕ್‌, ಸ್ಯಾನಿಟೈಸರ್‌, ಪ್ರಯಾಣಿಕರಿಗೂ ಮಾಸ್ಕ್‌ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಕ್ರಮಗಳನ್ನು ಕೈಗೊಳ್ಳಲಾಗವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ