ಆ್ಯಪ್ನಗರ

ಜೆಡಿಎಸ್ ಭದ್ರಕೋಟೆ ಛಿದ್ರವಾಗಿದೆ ಎಂದ ನಾರಾಯಣಗೌಡ

ಜೆಡಿಎಸ್ ಪಕ್ಷದ ಭದ್ರಕೋಟೆ ಛಿದ್ರವಾಗಿದೆ ಎಂದು ಸಚಿವ ನಾರಾಯಣ ಗೌಡ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹಾಸನ ಉಸ್ತುವಾರಿಯಾಗಿ ಸಚಿವ ಗೋಪಾಲಯ್ಯ ನೇಮಕ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು ಹೀಗೆ.

Vijaya Karnataka Web 2 Jun 2020, 3:22 pm
ಬೆಂಗಳೂರು: ಜೆಡಿಎಸ್ ಭದ್ರಕೋಟೆ ಈಗಾಗಲೇ ಛಿದ್ರವಾಗಿದೆ ಎಂದು ಸಚಿವ ನಾರಾಯಣಗೌಡ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಜೆಡಿಎಸ್ ಭದ್ರಕೋಟೆಯನ್ನ ಒಡೆಯುವ ಸಲುವಾಗಿ ಹಾಸನಕ್ಕೆ ಜಿಲ್ಲಾ ಉಸ್ತುವಾರಿಯಾಗಿ ಸಚಿವ ಗೋಪಾಲಯ್ಯರನ್ನ ನೇಮಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಜೆಡಿಎಸ್ ಭದ್ರಕೋಟೆ ಈಗಾಗಲೇ ಛಿದ್ರವಾಗಿದೆ. ಆ ಬಗ್ಗೆ ಹೆಚ್ಚಿಗೆ ಮಾತಾಡಲ್ಲ ಎಂದರು.
Vijaya Karnataka Web narayana gowda


ಇದೇ ವೇಳೆ ರೈತರಿಗೆ ಹೆಚ್ಚಿನ ನೆರವು ನೀಡಿದ ಸಿಎಂ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ಸಚಿವರು, ರೈತರ ಖಾತೆಗೆ ಆನ್ಲೈನ್ ಮೂಲಕ ಹಣ ಹಾಕುವ ಕೆಲಸ ಇಂದಿನಿಂದಲೇ ಪ್ರಾರಂಭ ಆಗಿದೆ. 15-20 ದಿನಗಳಲ್ಲಿ ಎಲ್ಲ ಅರ್ಹ ರೈತರ ಖಾತೆಗೆ ಹಣ ತಲುಪಲಿದೆ ಎಂದು ಮಾಹಿತಿ ನೀಡಿದರು.

'ನನ್ನನ್ನು ಎಂಎಲ್‌ಸಿ ಮಾಡಿದ್ರೆ ಬಿಜೆಪಿಗೆ ಶಕ್ತಿ, ಆದ್ರೆ ನಾನು ಬಿಜೆಪಿ ಸೇರಲ್ಲ': ವಾಟಾಳ್

ಕೋವಿಡ್ -19 ನಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೆಚ್ಚಿನ ನೆರವು ನೀಡಿದೆ. ಮುಖ್ಯಮಂತ್ರಿಗಳು ದಿನ ನಿತ್ಯ 16 ಗಂಟೆ ಕೆಲಸ ಮಾಡುತ್ತಿದ್ದಾರೆ. ಅವರಂತೆ ಸಚಿವರೆಲ್ಲರೂ ಅವಿರತ ಶ್ರಮಿಸುತ್ತಿದ್ದಾರೆ.

ಅಲ್ಲದೆ ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ 18 ಕೋಟಿ ರೂ. ಗು ಹೆಚ್ಚು ಹಣ ನೀಡಿದ್ದೇವೆ. ಆದ್ರೆ ಜಿಲ್ಲೆಯ ಶಾಸಕರಿಗೆ ನೇರವಾಗಿ ಅನುದಾನ ನೀಡಲು ಸಾಧ್ಯವಿಲ್ಲ. ಜಿಲ್ಲಾಡಳಿತದ ಮೂಲಕ ಎಲ್ಲ ತಾಲೂಕಿಗೂ ಸಾಕಷ್ಟು ಅನುದಾನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ