ಆ್ಯಪ್ನಗರ

ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಯಾವುದೇ ಸವಾಲುಗಳು ಇರಲಿಲ್ಲ! ಆರ್‌. ಅಶೋಕ್

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗ ಯಾವುದೇ ಸವಾಲುಗಳು ಇರಲಿಲ್ಲ. ಆದರೆ ಬಿಎಸ್‌ವೈ ಆಡಳಿತದಲ್ಲಿ ಸವಾಲುಗಳು ಹೆಚ್ಚಾಗಿವೆ ಎಂದು ಕಂದಾಯ ಸಚಿವ ಆರ್‌. ಅಶೋಕ್ ಹೇಳಿದ್ದಾರೆ.

Vijaya Karnataka Web 26 Jul 2020, 1:31 pm
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಯಾವುದೇ ಸವಾಲುಗಳು ಇರಲಿಲ್ಲ ಎಂದು ಕಂದಾಯ ಸಚಿವ ಆರ್‌. ಅಶೋಕ್ ಹೇಳಿದ್ದಾರೆ.
Vijaya Karnataka Web r ashok


ಬಿಎಸ್ ಯಡಿಯೂರಪ್ಪ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿ.ಎಸ್‌.ವೈ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಂದ ರಾಜ್ಯ ಒಂದಲ್ಲಾ ಒಂದು ಸವಾಲನ್ನು ಎದುರಾಗುತ್ತಲೇ ಇದೆ. ಆದರೆ, ತಮ್ಮ ಇಳಿ ವಯಸ್ಸಲ್ಲೂ ಬಿಎಸ್‌ವೈ ಎಲ್ಲಾ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ ಎಂದರು.

ಕೊರೊನಾ ನಿಯಂತ್ರಣ: ಸಂಡೇ ಲಾಕ್‌ಡೌನ್‌ನ ಅಗತ್ಯ ಏನಿದೆ?

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದು ಇದೀಗ ಒಂದು ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಆಗಿ ಯಡಿಯೂರಪ್ಪ ಅವರ ಕಾರ್ಯವೈಖರಿಯ ಕುರಿತು ಸಚಿವ ಆರ್. ಅಶೋಕ್ ಮೆಚ್ಚುಗೆಯ ಮಾತುಗಳನ್ನಾಡಿದರು. "ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಯಾವುದೇ ಸವಾಲುಗಳು ಇರಲಿಲ್ಲ. ಆದರೆ, ಬಿಎಸ್‌ವೈ ಅಧಿಕಾರದವಧಿಯಲ್ಲಿ ಬರೀ ಸವಾಲುಗಳೇ ಎದುರಾಗಿವೆ ಎಂದರು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಪ್ರವಾಹ ತಲೆಧೋರಿದ್ದ ಸಂದರ್ಭದಲ್ಲಿ ಮಂತ್ರಿ ಮಂಡಲ ರಚನೆಯಾಗದೆ ಇದ್ದಾಗ ಬಿಎಸ್‌ವೈ ಒಬ್ಬರೇ ಓಡಾಡಿ ನೊಂದ ಜನರಿಗೆ ನೆರವಾಗಿದ್ದರು. ನೆರೆಯಿಂದ ಮನೆ, ಆಸ್ತಿ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡಲು 5 ಲಕ್ಷ ರೂಪಾಯಿ ನೀಡಿದ್ದರು.

ಕೇಂದ್ರದ ವಿರುದ್ಧ ಕಾಂಗ್ರೆಸ್ ಹೋರಾಟ, ಸೋಮವಾರ ರಾಜಭವನದ ಮುಂದೆ ಪ್ರತಿಭಟನೆ

ಇದೀಗ ಕೊರೊನಾ ನಿಯಂತ್ರಣ ಮಾಡಲು ಬಿಎಸ್‌ವೈ ಪ್ರಯತ್ನ ಮಾಡುತ್ತಿದ್ದಾರೆ. ತಮ್ಮ ನಿವಾಸದಿಂದ ಹೊರಗೆ ಬಂದು ಕೆಲಸ ಮಾಡುತ್ತಿದ್ದಾರೆ. ಬೇರೆ ರಾಜ್ಯದ ಮುಖ್ಯಮಂತ್ರಿಗಳು ಹೊರಗೆ ಬರುತ್ತಿಲ್ಲ. ಅಂತದ್ದರಲ್ಲಿ ಬಿಎಸ್‌ ಯಡಿಯೂರಪ್ಪ ಈ ವಯಸ್ಸಲ್ಲೂ ಸಭೆಗಳನ್ನು ಮಾಡಿ ಕೋವಿಡ್‌ ನಿಯಂತ್ರಣಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ಪ್ರಶಂಶಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ