ಆ್ಯಪ್ನಗರ

ಹೊಸ ವರ್ಷಾಚರಣೆಗೆ ಕೋವಿಡ್‌ ಅಡ್ಡಿ; ಬಾರ್, ಪಬ್‌ ತೆರೆಯಲು ಇದ್ಯಾ ಅವಕಾಶ?

ಕೋವಿಡ್‌ 19 ಎರಡನೇ ಅಲೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ನಿಟ್ಟಿನಲ್ಲಿ ಹೊಸ ವರ್ಷದ ಆಚರಣೆಗೂ ಕಡಿವಾಣ ಬೀಳಲಿದೆ.

Vijaya Karnataka Web 4 Dec 2020, 1:25 pm
ಬೆಂಗಳೂರು: ಹೊಸ ವರ್ಷಾಚರಣೆಗೆ ಕೋವಿಡ್ ಅಡ್ಡಿ ಆಗಲಿದೆ. ಬಾರ್‌ಪಬ್‌ಗಳಲ್ಲಿ ಎಂಜಾಯ್‌ ಮಾಡಲು ಈ ಬಾರಿ ಅವಕಾಶ ಸಿಗುವ ಸಾಧ್ಯತೆ ಕಡಿಮೆ. ಈ ಕುರಿತಾಗಿ ಮಾಹಿತಿ ನೀಡಿದ ಸಚಿವ ಆರ್‌. ಅಶೋಕ್‌ ಬಾರ್, ಪಬ್ ಗಳು ತೆರೆದಿರುತ್ತಿದ್ದರೂ ಅಲ್ಲಿ ಕೂಡ ಜನಜಂಗುಳಿಗೆ ಅವಕಾಶವಿಲ್ಲ ಎಂದಿದ್ದಾರೆ.
Vijaya Karnataka Web pubs


ಕೋವಿಡ್‌ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಬಾರಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಹೊಸವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಎಂದಿನಂತೆ ಬಾರ್, ಪಬ್ ಗಳು ತೆರೆದಿರುತ್ತಿದ್ದರೂ ಅಲ್ಲಿ ಕೂಡ ಜನಜಂಗುಳಿಗೆ ಅವಕಾಶವಿಲ್ಲ. ಬದಲಾಗಿ ಪಾಸ್ ಇದ್ದವರಿಗೆ ಮಾತ್ರ ಬಾರ್ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

30 ಕೋಟಿ ಜನರಿಗೆ ಕೋವಿಡ್‌ ಲಸಿಕೆ! ಸನ್ನದ್ಧವಾಗಿರಲು ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ

ಕೋವಿಡ್‌ ಮುಂಜಾಗರೂಕತಾ ನಿಟ್ಟಿನಲ್ಲಿ ಕೇವಲ 50 ಜನರನ್ನು ಮಾತ್ರ ಬಾರ್ ಒಳಗೆ ಬಿಡಲು ಅವಕಾಶ ನೀಡಲಾಗಿದೆ ಎಂದ ಅವರು ಹಲವಾರು ವರ್ಷಗಳಿಂದ ಹೊಸ ವರ್ಷ ಆಚರಿಸಿಕೊಂಡು ಬಂದಿದ್ದೇವೆ. ಆದರೆ, ಪ್ರಸ್ತುತ ಸಂದರ್ಭದಲ್ಲಿ ಈ ಒಂದು ಬಾರಿ ಆಚರಿಸದಿದ್ದರೆ ಏನೂ ಆಗುವುದಿಲ್ಲ ಎಂದರು.

ಇನ್ನು ಪ್ರತಿವರ್ಷ ಸಂಭ್ರಮದ ಹೊಸ ವರ್ಷಾಚರಣೆಗೆ ಸಾಕ್ಷಿಯಾಗುವ ಬ್ರಿಗೇಡ್ ಮತ್ತು ಎಂಜಿ ರಸ್ತೆಯಲ್ಲಿ ಬಹಿರಂಗವಾಗಿ ಸಂಭ್ರಮ ಆಚರಿಸಲು ಈ ಬಾರಿ ಅವಕಾಶ ನೀಡಬಾರದೆಂದು ಸೂಚನೆ ನೀಡಲಾಗಿದೆ. ಇನ್ನು ನೈಟ್ ಕರ್ಫ್ಯೂ ಬಗ್ಗೆ ಕೂಡ ಸಿಎಂ ಜೊತೆ ಮಾತನಾಡಿದ್ದೇವೆ. ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಕೋವಿಡ್‌ ಎರಡನೇ ಅಲೆ ಜನವರಿ ತಿಂಗಳಲ್ಲಿ ಬರುವ ಸಾಧ್ಯತೆ ಇದ್ದು ಈ ನಿಟ್ಟಿನಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಹೊಸ ವರ್ಷದ ಆಚರಣೆಗೂ ಕಡಿವಾಣ ಬೀಳುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ