ಆ್ಯಪ್ನಗರ

ಜೆಡಿಎಸ್ ಪಕ್ಷವನ್ನು ಮುಗಿಸಿದ್ದೇ ಡಿಕೆಶಿ! ಆರ್‌. ಅಶೋಕ್‌ ಆರೋಪ

ಜೆಡಿಎಸ್ ಪಕ್ಷವನ್ನು ಮುಗಿಸಿದ್ದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಂತೆ! ಹೀಗಂತ ಹೇಳಿದವರು ಕಂದಾಯ ಸಚಿವ ಆರ್‌. ಅಶೋಕ್. ಜೆಡಿಎಸ್‌ನ್ನು ಹೇಗೆ ಡಿಕೆಶಿ ಮುಗಿಸಿದ್ರು ಎಂಬ ಕುರಿತಾಗಿ ಅವರು ಏನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

Vijaya Karnataka Web 20 Oct 2020, 4:13 pm
ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಆ ಪಕ್ಷವನ್ನು ಮುಗಿಸಿದ್ದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂದು ಸಚಿವ ಆರ್‌. ಅಶೋಕ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.
Vijaya Karnataka Web R ashok


ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್‌ಆರ್‌ ನಗರ ಉಪಚುನಾವಣೆಯಲ್ಲಿ ಜೆಡಿಎಸ್‌ ಜೊತೆಗೆ ಬಿಜೆಪಿ ಹೊಂದಾಣಿಕೆ ಮಾಡಿಲ್ಲ. ಬದಲಾಗಿ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್‌ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಆ ಪಕ್ಷವನ್ನು ಡಿಕೆಶಿ ಮುಗಿಸಿದ್ರು ಎಂದು ಆರೋಪ ಮಾಡಿದರು.

ಪುಟ್ಟಣ್ಣ ಕುಟುಂಬಕ್ಕೆ ಉದ್ಯೋಗ ಕೊಡಿಸಿದ್ದೆ, ಎಚ್‌ಡಿಕೆಗೆ ಮುಳುವಾಗುತ್ತಾ ಹೇಳಿಕೆ?

ರಾಜರಾಜೇಶ್ವರಿ ‌ ನಗರ ಚುನಾವಣಾ ಪ್ರಚಾರ ನೋಡಿದರೆ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಮಾತ್ರ ಸ್ಪರ್ಧೆ ಇದೆ ಎಂದು ಅನಿಸುತ್ತದೆ. ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ‌ ಮಾಡಿಕೊಂಡಿದೆ ಎಂಬ ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರವಾಗಿದೆ. ಯಾವುದೇ ಕಾರಣಕ್ಕೂ ನಾವು ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದರು.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್‌ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮಾಡುತ್ತಿದೆ. ಒಕ್ಕಲಿಗ ಮತವನ್ನು ವಿಭಜನೆ ಮಾಡುವ ಉದ್ದೇಶದಿಂದ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂಬುವುದು ಕಾಂಗ್ರೆಸ್ ಮುಖಂಡರ ಆರೋಪ. ಆದರೆ ಆರ್‌ ಅಶೋಕ್ ಈ ಆರೋಪವನ್ನು ನಿರಾಕರಿಸಿದ್ದಾರೆ.

ಕಾಂಗ್ರೆಸ್ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಡಿಕೆ ಶಿವಕುಮಾರ್‌ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ಜೆಡಿಎಸ್‌ ಜೊತೆಗೆ ಅಂತರವನ್ನು ಕಾಯ್ದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಎಚ್‌ಡಿಕೆ ಪರೋಕ್ಷವಾಗಿ ಡಿಕೆಶಿ ವಿರುದ್ಧ ಹರಿಹಾಯ್ದಿದ್ದರು.

ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ

ರಾಜ್ಯದಲ್ಲಿ ಸದ್ಯ 3 ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿಎಂ ಸೀಟ್ ಖಾಲಿ ಇದ್ದರೆ ಟವೆಲ್ ಹಾಕಬಹುದು. ಸೀಟ್ ಖಾಲಿ ಇಲ್ಲ ಎಂದಮೇಲೆ ಟವೆಲ್ ಎಲ್ಲಿ ಹಾಕುತ್ತೀರ? ಎಂದು ಆರ್‌. ಅಶೋಕ್ ಪ್ರಶ್ನಿಸಿದ್ದಾರೆ.

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ: ಯತ್ನಾಳ್ ಹೇಳಿಕೆಗೆ ಬಿಎಸ್‌ವೈ ಆಪ್ತರ ವಿರೋಧ

ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಖಾಲಿ ಇಲ್ಲದ ಸೀಟ್ಗೆ ಟವೆಲ್ ಹಾಕಿ ಸಮಯ ವ್ಯರ್ಥ ಮಾಡೋದು ಸರಿಯಲ್ಲ ಯತ್ನಾಳ್ಗೆ ಟಾಂಗ್ ಕೊಟ್ಟರು. ಯಡಿಯೂರಪ್ಪನವರು ಹೆಚ್ಚು ದಿನ ಸಿಎಂ ಸ್ಥಾನದಲ್ಲಿ ಇರುವುದಿಲ್ಲ. ಉತ್ತರ ಕರ್ನಾಟಕಕ್ಕೆ ಈ ಬಾರಿ ಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂದು ಬಿಜೆಪಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ