ಆ್ಯಪ್ನಗರ

ರಾಮಮಂದಿರ ಶಿಲಾನ್ಯಾಸ: ಯದುಗಿರಿ ಯತಿರಾಜ ಮಠದಲ್ಲಿ ನಡೆದ ಯಜ್ಞದಲ್ಲಿ ಭಾಗಿಯಾದ ರಮೇಶ್ ಜಾರಕಿಹೊಳಿ

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಯದುಗಿರಿ ಯತಿರಾಜ ಮಠದಲ್ಲಿ ನಡೆದ ಯಜ್ಞದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಭಾಗಿಯಾದರು. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka Web 5 Aug 2020, 12:38 pm
ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಂಭ್ರಮದಿಂದ ನಡೆಯುತ್ತಿದೆ. ಇತ್ತ ರಾಜ್ಯದಲ್ಲೂ ವಿಶೇಷ ಪೂಜೆ ಪುರಸ್ಕಾರಗಳು ನಡೆಯುತ್ತಿವೆ. ರಾಮಮಂದಿರ ಭೂಮಿಪೂಜೆ ಹಿನ್ನೆಲೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಕೂಡಾ ವಿಶೇಷ ಯಜ್ಞದಲ್ಲಿ ಭಾಗಿಯಾದರು.
Vijaya Karnataka Web ramesh jarakiholi


ಬೆಂಗಳೂರಿನ ಯದುಗಿರಿ ಯತಿರಾಜ ಮಠದಲ್ಲಿ ಹಮ್ಮಿಕೊಂಡಿದ್ದ ಮೂರು ಕೋಟಿ ರಾಮ‌ನಾಮ ಲೇಖನ ಯಜ್ಞದಲ್ಲಿ ಭಾಗವಹಿಸಿದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಭಾಗಿಯಾಗುವ ಮೂಲಕ ಭೂಮಿಪೂಜೆಗೆ ಶುಭಹಾರೈಸಿದರು. ಇನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು ಕೂಡಾ ಮಲ್ಲೇಶ್ವರಂ ಶ್ರೀರಾಮ ಮಂದಿರದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಟ್ವಿಟ್ಟರ್‌ನಲ್ಲಿ ಪೂಜೆಯ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

LIVE ಅಪ್ಡೇಟ್ಸ್: ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಗೆ ಕ್ಷಣಗಣನೆ

ಅಯೋಧ್ಯೆಯ ಭೂಮಿ ಪೂಜೆ ಪ್ರಯುಕ್ತ ಮಲ್ಲೇಶ್ವರ ಶ್ರೀರಾಮಮಂದಿರದಲ್ಲಿ ವಿಶೇಷ ಪೂಜೆ. ಶ್ರೀರಾಮನಿಗೆ ಪೂಜೆ, ಪುಷ್ಪಾರ್ಚನೆ ಮೂಲಕ ಭಕ್ತಿ-ಭಾವದ ಅನಂತ ನಮನಗಳು. ಐತಿಹಾಸಿಕ ಕ್ಷಣಕ್ಕೆ ದೇಶದ ಅಸಂಖ್ಯಾತ ಬಾಂಧವರೊಂದಿಗೆ ಸಾಕ್ಷಿಯಾಗುತ್ತಿರುವುದಕ್ಕೆ ನಾನು ಧನ್ಯ. 500 ವರ್ಷಗಳ ಬಳಿಕ ಅಯೋಧ್ಯೆಯ ಪುಣ್ಯಭೂಮಿಗೆ ಮತ್ತಷ್ಟು ಕಳೆ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ.

ಭೂಮಿ ಪೂಜೆಯ ಈ 32 ಸೆಕೆಂಡ್‌ಗಳ ಶುಭ ಘಳಿಗೆ ಬಗ್ಗೆ ನಿಮಗೆಷ್ಟು ಗೊತ್ತು?‌

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕೂಡಾ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಶಂಕುಸ್ಥಾಪನೆಯ ಸಂದರ್ಭದಲ್ಲಿ ದೆಹಲಿಯ ಅವರ ನಿವಾಸದಲ್ಲಿ ಶ್ರೀರಾಮ ವಿಶೇಷ ಪೂಜೆ ಕೈಗೊಂಡಿದ್ದಾರೆ. ಹೀಗೆ ಬಿಜೆಪಿಯ ಹಲವು ಮುಖಂಡರು ಮನೆಗಳಲ್ಲಿ ಹಾಗೂ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುರಸ್ಕಾರಗಳನ್ನು ಮಾಡುವ ಮೂಲಕ ಶುಭಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ