ಆ್ಯಪ್ನಗರ

ಮಹದಾಯಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸಚಿವರ ಭೇಟಿಗೆ ರಮೇಶ್ ಜಾರಕಿಹೊಳಿ ನಿರ್ಧಾರ

ಮಹದಾಯಿ ಕುರಿತಾಗಿ ಗೆಜೆಟ್‌ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಲು ಸಚಿವ ರಮೇಶ್ ಜಾರಕಿಹೊಳಿ ನಿರ್ಧರಿಸಿದ್ದಾರೆ. ಬುಧವಾರ ಬೆಳಗ್ಗೆ ದೆಹಲಿಯಲ್ಲಿ ಕಾನೂನು ತಜ್ಞರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಯಲಿದೆ.

Vijaya Karnataka Web 25 Feb 2020, 10:32 am
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಮಂಡಳಿ ನೀಡಿರುವ ತೀರ್ಪಿನ ಆದೇಶ ಹೊರಡಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲು ಸಚಿವ ರಮೇಶ್ ಜಾರಕಿಹೊಳಿ ನಿರ್ಧರಿಸಿದ್ದಾರೆ.
Vijaya Karnataka Web minister ramesh jarkiholi will meet central minister on mahadayi water dispute
ಮಹದಾಯಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸಚಿವರ ಭೇಟಿಗೆ ರಮೇಶ್ ಜಾರಕಿಹೊಳಿ ನಿರ್ಧಾರ


ಬುಧವಾರ( ಫೆ. 26) ರಂದು ಬೆಳಿಗ್ಗೆ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, ಆದಷ್ಟು ಶೀಘ್ರವಾಗಿ ಮಹದಾಯಿ ನ್ಯಾಯಮಂಡಳಿಯ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ಬುಧವಾರ ಸಂಜೆ ನೀರು ಹಂಚಿಕೆ ವಿವಾದಗಳಿಗೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ಕಾನೂನು ತಜ್ಞರು, ನಿರಾವರಿ ಇಲಾಖೆಯ ತಾಂತ್ರಿಕ ಅಧಿಕಾರಿಗಳ ಜೊತೆಗೆ ಸಭೆ ನಡೆಯಲಿದೆ.

ಕಾಂಗ್ರೆಸ್‌ ಕುಮ್ಮಕ್ಕಿನಿಂದಲೇ ಪಾಕ್‌ ಪರ ಬರಹ ! ಜಗದೀಶ್ ಶೆಟ್ಟರ್‌ ಆರೋಪ

2018 ರಲ್ಲಿ ಮಹದಾಯಿ ನ್ಯಾಯ ಮಂಡಳಿ ತೀರ್ಪು ನೀಡಿದ್ದರೂ, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೇ ಇದ್ದುದರಿಂದ ಯೋಜನೆ ವಿಳಂಬವಾಗಿದೆ. ಆದರೆ, ಫೆಬ್ರವರಿ 20 ರಂದು ಸುಪ್ರೀಂ ಕೋರ್ಟ್ ಗೆಜೆಟ್ ನೊಟಿಫಿಕೇಶನ್ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

'ಮಹದಾಯಿ ಬಗ್ಗೆ ಸೋಮವಾರ ಉನ್ನತ ಮಟ್ಟದ ಸಭೆ': ಸಚಿವ ರಮೇಶ್ ಜಾರಕಿಹೊಳಿ

ಸುಪ್ರೀಂ ಕೋರ್ಟ್ ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ಕೋರಲು ಗೋವಾ ಸರ್ಕಾರ ಸಿದ್ದತೆ ಮಾಡಿಕೊಳ್ಳುತ್ತಿರುವುದರಿಂದ ಆದಷ್ಟು ಬೇಗ ಗೆಜೆಟ್ ನೊಟಿಫಿಕೇಶನ್ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಸಚಿವರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸರ್ವ ಪಕ್ಷಗಳ ನಿಯೋಗಕ್ಕೆ ಚಿಂತನೆ

ಮಹದಾಯಿ ಆದೇಶವನ್ನು ಗೆಜೆಟ್ ನೊಟಿಫಿಕೇಶ್ ಹೊರಡಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಸರ್ವ ಪಕ್ಷಗಳ ನಿಯೋಗ ಕರೆದುಕೊಂಡು ಹೋಗುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿ ನಂತರ ನಿರ್ಧಾರ ಕೈಗೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ