ಆ್ಯಪ್ನಗರ

ಹೊರಟ್ಟಿಗೆ ಸರಕಾರ ಉರುಳಿಸುವ ದುರುದ್ದೇಶ ಇಲ್ಲ: ಶಿವಾನಂದ ಪಾಟೀಲ್‌

ಹೊರಟ್ಟಿಯವರು ಬೆದರಿಸುವ ಉದ್ದೇಶಕ್ಕೆ ಈ ರೀತಿ ಹೇಳಿರಬಹುದು. ಸರಕಾರವನ್ನು ಉರುಳಿಸುವ ಉದ್ದೇಶ ಅವರಿಗೆ ಇಲ್ಲದಂತಿಲ್ಲ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದರು.

Vijaya Karnataka Web 19 May 2019, 5:23 pm
ಬಾಗಲಕೋಟೆ: ವಿಧಾನಸಭೆ ವಿಸರ್ಜನೆ ಕುರಿತು ಜೆಡಿಎಸ್‌ ನಾಯಕ ಬಸವರಾಜ ಹೊರಟ್ಟಿ ಯಾವುದೇ ದುರುದ್ದೇಶ ನೀಡಿರುವ ಸಲಹೆ ಅಲ್ಲ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ.
Vijaya Karnataka Web ಶಿವಾನಂದ ಪಾಟೀಲ್‌
ಶಿವಾನಂದ ಪಾಟೀಲ್‌


ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರಕಾರವನ್ನು ಬೀಳಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡಿಲ್ಲ ಎಂಬ ವಿಶ್ವಾಸವಿದೆ ಎಂದರು.

ಹೊರಟ್ಟಿಯವರು ಬೆದರಿಸುವ ಉದ್ದೇಶಕ್ಕೆ ಈ ರೀತಿ ಹೇಳಿರಬಹುದು. ಸರಕಾರವನ್ನು ಉರುಳಿಸುವ ಉದ್ದೇಶ ಅವರಿಗೆ ಇಲ್ಲದಂತಿಲ್ಲ ಎಂದು ಶಿವಾನಂದ ಪಾಟೀಲ್‌ ತಿಳಿಸಿದರು.

ಭೀಕರ ಬರ ಕೃಷ್ಣಾ ನದಿ ಖಾಲಿ

ಮಹಾರಾಷ್ಟ್ರ ಸರಕಾರ ಮಾನವೀಯತೆ ದೃಷ್ಟಿಯಿಂದ ಕೃಷ್ಣಾ ನದಿಗೆ ನೀರು ಹರಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದೆ ಎಂದು ನಿರ್ಲಕ್ಷ್ಯ ಮಾಡಬಾರದು. ಬಿಜೆಪಿಯವರು ಈ ಬಗ್ಗೆ ಕಾಳಜಿವಹಿಸಬೇಕು. ಶೀಘ್ರದಲ್ಲಿ ನೀರು ಹರಿಸುವ ನಿರೀಕ್ಷೆ ಇದೆ. ಮಹಾರಾಷ್ಟ್ರ ಸರಕಾರ ನೀರು ಬಿಟ್ಟರೆ ಬಾಗಲಕೋಟೆ, ಬೆಳಗಾವಿ, ವಿಜಯಪುರ ‌ಜಿಲ್ಲೆಗೆ ಅನುಕೂಲವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ವಿಜಯಪುರದಲ್ಲಿ ನಿನ್ನೆ ನಡೆದ ಅಪಘಾತ ಪ್ರಕರಣ ಸಂಬಂಧ ಮಾಹಿತಿ ನೀಡಿದ ಸಚಿವ ಪಾಟೀಲ, ಮೃತರ ಕುಟುಂಬಕ್ಕೆ ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ನಾನು ವೈಯಕ್ತಿಕವಾಗಿ ಒಂದು ಲಕ್ಷ ರೂ. ಪರಿಹಾರ ನೀಡಿದ್ದೇನೆ. ಸರಕಾರದಿಂದಲೂ ಸೂಕ್ತ ಪರಿಹಾರ ಸಿಗಲಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರಕಾರದಿಂದ ಭರಿಸಲಿದೆ ಎಂದರು ಸಚಿವ ಶಿವಾನಂದ ಪಾಟೀಲ್‌ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ