ಆ್ಯಪ್ನಗರ

‘ಪ್ರಾಮಾಣಿಕ ತನಿಖೆಯ ಬಗ್ಗೆ ಇಷ್ಟು ಭಯವೇಕೆ ಮಿಸ್ಟರ್ ಡಿಕೆ.ಶಿವಕುಮಾರ್? : ಡಾ.ಸುಧಾಕರ್

ಬೆಂಗಳೂರು ಕಮಿಷನರ್ ಕಮಲ್ ಪಂಥ್ ವಿರುದ್ಧ ಕಿಡಿಕಾರಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ವಿರುದ್ಧ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸುಧಾಕರ್, ಯಾರನ್ನು ರಕ್ಷಿಸಲು ಈ ಪ್ರಯತ್ನ ಎಂದು ಹರಿಹಾಯ್ದಿದ್ದಾರೆ.

Vijaya Karnataka Web 21 Aug 2020, 4:03 pm
ಬೆಂಗಳೂರು: ಕೆ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬೆಂಗಳೂರು ಕಮಿಷನರ್ ಕಮಲ್ ಪಂಥ್ ವಿರುದ್ಧ ಕಿಡಿಕಾರಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಮಿಷನರ್ ಅವರೇ ಬಿಜೆಪಿ ಏಜೆಂಟರ್‌ನಂತೆ ವರ್ತಿಸಬೇಡಿ, ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯಬೇಡಿ, ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಎಂದು ಕಟುವಾಗಿ ಆಗ್ರಹಿಸಿದ್ದರು.
Vijaya Karnataka Web DR SUDHAKAR


'ಕಲಿಯುಗದ ಸಮಸ್ಯೆಗಳಿಗೆ ಗಣಪತಿಯೇ ಉತ್ತರ' : ಗೌರಿಗಣೇಶ ಹಬ್ಬದ ಶುಭಾಶಯ

ಬೆಂಗಳೂರು ಕಮಿಷನರ್‌ರನ್ನು ಬಿಜೆಪಿ ಏಜೆಂಟ್ ಎಂದು ಕರೆದಿದ್ದಕ್ಕೆ ಕಿಡಿಗೊಂಡಿದ್ದ ರಾಜ್ಯ ಬಿಜೆಪಿ ನಾಯಕರು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಡಿಕೆ ಶಿವಕುಮಾರ್ ಹೇಳಿಕೆ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹರಿಹಾಯ್ದಿದ್ದಾರೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸುಧಾಕರ್, ಯಾರನ್ನು ರಕ್ಷಿಸಲು ಈ ಪ್ರಯತ್ನ ಎಂದು ಹರಿಹಾಯ್ದಿದ್ದಾರೆ.

'ನಿಮಗೆ ಕೊಟ್ಟು ಗೊತ್ತಿಲ್ಲ, ಕಿತ್ತುಕೊಳ್ಳೊದಷ್ಟೇ ಗೊತ್ತು' : ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ತಮ್ಮ ಟ್ವಿಟರ್‌ ಪೋಸ್ಟ್‌ನಲ್ಲಿ ಡಿಕೆಶಿ ವಿರುದ್ಧ ಸುಧಾಕರ್ ವಾಗ್ದಾಳಿ ನಡೆಸಿದ್ದು, ‘ಗಲಭೆ ಪ್ರಕರಣದ ಕಿಡಿಗೇಡಿಗಳ ವಿರುದ್ಧ ಪ್ರಾಮಾಣಿಕ ತನಿಖೆ ನಡೆಸುತ್ತಿರುವ ಪೊಲೀಸ್ ಕಮಿಷನರ್ ಕಮಲ್ ಪಂಥ್ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಧಮ್ಕಿ ಹಾಕಿದ್ದಾರೆ ಮತ್ತು ಬಿಜೆಪಿ ಏಜೆಂಟ್ ಎಂದು ನಿಂದಿಸಿದ್ದಾರೆ. ಪ್ರಾಮಾಣಿಕ ತನಿಖೆಯ ಬಗ್ಗೆ ಇಷ್ಟು ಭಯ ಏಕೆ ಮಿಸ್ಟರ್ ಡಿಕೆ ಶಿವಕುಮಾರ್ ಅವರೇ? ಯಾರನ್ನು ರಕ್ಷಿಸಲು ಈ ಪ್ರಯತ್ನ? ಎಂದು ಪ್ರಶ್ನಿಸಿದ್ದಾರೆ.


ದಲಿತ ಶಾಸಕ ಅಖಂಡ ಶ್ರೀನಿವಾಸ್‌ ಮನೆ ಸುಟ್ಟು ಕಾಂಗ್ರೆಸ್‌ ಪಾಪದ ಕೆಲಸ ಮಾಡಿದೆ! ಸುಧಾಕರ್‌ ಕಿಡಿ

ಶಾಸಕ ಅಖಂಡ ಶ್ರೀನಿವಾಸ್ ಮನೆಮುಂದೆ ಕೆಲದಿನಗಳ ಹಿಂದೆ ಗಲಭೆ ನಡೆಸಿದ್ದ ಕಿಡಿಗೇಡಿಗಳು ಶಾಸಕರ ಮನೆ ಪೊಲೀಸ್ ಸ್ಟೇಷನ್ ಸೇರಿದಂತೆ ಸಾರ್ವಜನಿಕ ಆಸ್ತಪಾಸ್ತಿಗಳನ್ನು ಬೆಂಕಿ ಹಚ್ಚಿ ನಾಶಗೊಳಿಸಿದ್ದರು. ನಂತರ ಸರ್ಕಾರ ಗಲಭೆಕೋರರಿಂದಲೇ ನಷ್ಟ ಭರಿಸುವ ತೀರ್ಮಾನಕ್ಕೆ ಬಂದಿತ್ತು. ಈ ಘಟನೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ