ಆ್ಯಪ್ನಗರ

ಮುನಿರತ್ನಗೆ ಸಚಿವ ಸ್ಥಾನ ಕೈತಪ್ಪಲು ಕಾರಣ ಏನು? ಉಮೇಶ್ ಕತ್ತಿ ಕೊಟ್ಟ ಉತ್ತರ ಹೀಗಿದೆ

ಮುನಿರತ್ನಗೆ ಸಚಿವ ಸ್ಥಾನ ಕೈತಪ್ಪಲು ಏನು ಕಾರಣ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಈ ಪ್ರಶ್ನೆಗೆ ನೂತನ ಸಚಿವ ಉಮೇಶ್ ಕತ್ತಿ ಉತ್ತರಿಸಿದ್ದಾರೆ. ಸಚಿವ ಸ್ಥಾನ ಕೈತಪ್ಪಲು ಅವರು ನೀಡಿದ ಕಾರಣ ಇದಾಗಿದೆ.

Vijaya Karnataka Web 14 Jan 2021, 11:46 am
ಬೆಂಗಳೂರು: ಭಾರೀ ನಿರೀಕ್ಷೆಯಲ್ಲಿದ್ದ ಆರ್.ಆರ್‌ ನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡುಗೆ ಸಚಿವ ಸ್ಥಾನ ಕೈತಪ್ಪಿರುವುದು ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಇದಕ್ಕೆ ಏನು ಕಾರಣ ಎಂಬ ಪ್ರಶ್ನೆಗೆ ನೂತನ ಸಚಿವ ಉಮೇಶ್ ಕತ್ತಿ ಉತ್ತರ ನೀಡಿದ್ದಾರೆ.
Vijaya Karnataka Web Umesh Katti


ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಮುನಿರತ್ನ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ಇದೆ. ನ್ಯಾಯಾಲಯದ ಪ್ರಕರಣ ಮುಕ್ತಾಯ ಆದ ಬಳಿಕ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಮುನಿರತ್ನ ಅವರು ಸಚಿವರಾಗುತ್ತಾರೆ ಎಂದರು.

ಸಂಪುಟ ವಿಸ್ತರಣೆ: ಸಚಿವ ಸ್ಥಾನದ ಭರವಸೆಯನ್ನುನಾನು ಯಾರಿಗೂ ನೀಡಿಲ್ಲ! ಬಿಎಸ್‌ವೈ

ಒಟ್ಟು 34 ಸಚಿವ ಸ್ಥಾನ ಇರುತ್ತದೆ. ಹಾಗಾಗಿ 34 ಮಂದಿಯನ್ನು ಸಚಿವರನ್ನಾಗಿ ಮಾಡಲಾಗಿದೆ. ಉಳಿದವರಿಗೂ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಸಹ ಒಂದುವರೆ ವರ್ಷ ಕಾದಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಉಲ್ಲೇಖಿಸಿದರು.

ಇನ್ನು ಖಾತೆ ಅದಲು ಬದಲು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಖಾತೆ ಅದಲು ಬದಲು ಸಿಎಂ ನಿರ್ಧಾರಕ್ಕೆ ಬಿಟ್ಟಿದ್ದು, ಯಾವ ಖಾತೆಯನ್ನು ಕೊಟ್ಟರೂ ನಾನು ನಿಭಾಯಿಸ್ತೇನೆ ಎಂದು ತಿಳಿಸಿದರು. ಸಂಪುಟ ವಿಸ್ತರಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು ಹಲವು ಶಾಸಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ