ಆ್ಯಪ್ನಗರ

ಸಚಿವ ಸ್ಥಾನಕ್ಕೆ ಜಮೀರ್‌ ಅಹ್ಮದ್‌ ಅರ್ಹರಲ್ಲ: ತನ್ವೀರ್ ಸೇಠ್

ಅರ್ಹತೆ ಇಲ್ಲದವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ ಎಂದು ಮಾಜಿ ಸಚಿವ ತನ್ವೀರ್‌ ಸೇಠ್‌ ಅಸಮಾಧಾನ ಹೊರಹಾಕಿದ್ದಾರೆ.

Vijaya Karnataka Web 14 Jun 2018, 4:01 pm
ಬೆಂಗಳೂರು: ಅರ್ಹತೆ ಇಲ್ಲದವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ ಎಂದು ಮಾಜಿ ಸಚಿವ ತನ್ವೀರ್‌ ಸೇಠ್‌ ಅಸಮಾಧಾನ ಹೊರಹಾಕಿದ್ದಾರೆ.
Vijaya Karnataka Web thanvir


ಖಾಸಗಿ ಹೋಟೆಲ್‌ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ನಾಯಕತ್ವವನ್ನು ಮುಗಿಸುವ ಯತ್ನ ನಡೆಯುತ್ತಿದೆ. ಅರ್ಹರಲ್ಲದವರಿಗೆ ಸಂಪುಟದಲ್ಲಿ ಸ್ಥಾನಮಾನ ಕೊಟ್ಟಿದ್ದಾರೆ. ಜಮೀರ್ ಅಹ್ಮದ್ ಖಾನ್ ಹಾಗೂ ಯು ಟಿ ಖಾದರ್ ರಾಜ್ಯ ಮಟ್ಟದಲ್ಲಿ ನಮ್ಮ ಸಮುದಾಯವನ್ನು ಪ್ರತಿನಿಧಿಸುವ ಸಾಮರ್ಥ್ಯ ಹೊಂದಿಲ್ಲ. ನಾಯಕತ್ವ ಗುಣ ಅವರಲ್ಲಿ ಇಲ್ಲ ಎಂದು ಹೇಳಿದ್ದಾರೆ.

ಜಮೀರ್ ಅಹ್ಮದ್ ಖಾನ್ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಪ್ರಯತ್ನ ಮಾಡಿದ್ದರು. ಬೇರೆ ಪಕ್ಷದಿಂದ ಬಂದ ಜಮೀರ್ ಗೆ ಸಚಿವ ಸ್ಥಾನ ನೀಡಲಾಗಿದೆ. ಈ ವಿಚಾರದ ಬಗ್ಗೆ ಕೆ ಸಿ ವೇಣುಗೋಪಾಲ್ ಮಾತ್ರವಲ್ಲ. ಪಕ್ಷದ ವರಿಷ್ಠರ ಗಮನಕ್ಕೆ ತಂರಲಾಗಿದೆ. ರಾಜ್ಯ ಮಟ್ಟದಲ್ಲಿ ಮುಸ್ಲಿಂ ನಾಯಕತ್ವ ನಿರ್ವಹಿಸುವಂತವರಿಗೆ ಇನ್ನೊಂದು ಸಚಿವ ಸ್ಥಾನ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದೇ ವೇಳೆ ಇಂದು ನಡೆಯಲಿರುವ ಸಮನ್ವಯ ಸಮಿತಿ ಸಭೆ ಸಂಬಂಧ ವೇಣುಗೋಪಾಲ್‌ ಅವರೊಂದಿಗೆ ಚರ್ಚಿಸಲು ಆಗಮಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ತನ್ವೀರ್‌ ಸೇಠ್‌ ಹೇಳಿಕೆಗೆ ಉತ್ತರಿಸಲು ನಿರಾಕರಿಸಿದರು. ಅಲ್ಲದೆ ಶಾಸಕ ಎಂ.ಬಿ.ಪಾಟೀಲ್‌ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಯಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮಾತನಾಡಬೇಕಾದ ವಿಚಾರಗಳ ಬಗ್ಗೆ ಚರ್ಚಿಸಲು ವೇಣುಗೋಪಾಲ್‌ ಅವರನ್ನು ಭೇಟಿ ಮಾಡುತ್ತಿರುವುದಾಗಿ ಪರಮೇಶ್ವರ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ