ಆ್ಯಪ್ನಗರ

ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ಕಗ್ಗೊಲೆ ಎಂದು ಟ್ವೀಟಿಸಿದ ಕೈ ಶಾಸಕ

ಮಂತ್ರಿಮಂಡಲ ವಿಸ್ತರಣೆಯನ್ನು ಮುಂದೂಡುವ ಮೂಲಕ ಕಾಂಗ್ರೆಸ್‌ ಪಕ್ಷವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಶಾಸಕರನ್ನು ಅಪಮಾನಿಸಲಾಗುತ್ತಿದೆ. ಜತೆಗೆ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ.

Vijaya Karnataka 8 Oct 2018, 10:53 am
ಬೆಂಗಳೂರು: ಸಂಪುಟ ವಿಸ್ತರಣೆ ಮುಂದೂಡಿಕೆ ಹಿನ್ನೆಲೆಯಲ್ಲಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್‌ ಕಾಂಗ್ರೆಸ್‌ ನಾಯಕತ್ವಕ್ಕೇ ಸವಾಲೆಸೆಯುವಂತೆ ಟ್ವೀಟ್‌ ಮಾಡಿದ್ದಾರೆ.
Vijaya Karnataka Web BC PATIL


ಮಂತ್ರಿಮಂಡಲ ವಿಸ್ತರಣೆಯನ್ನು ಮುಂದೂಡುವ ಮೂಲಕ ಕಾಂಗ್ರೆಸ್‌ ಪಕ್ಷವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಶಾಸಕರನ್ನು ಅಪಮಾನಿಸಲಾಗುತ್ತಿದೆ. ಜತೆಗೆ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಟ್ವೀಟ್‌ನಲ್ಲಿ ನೇರ ಆರೋಪ ಮಾಡಿದ್ದಾರೆ. ಜತೆಗೆ ತಮ್ಮ ಟ್ವೀಟನ್ನು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ.ಜಿ. ಪರಮೇಶ್ವರ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೂ ಟ್ಯಾಗ್‌ ಮಾಡಿದ್ದಾರೆ.


ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಬಿ.ಸಿ. ಪಾಟೀಲ್‌ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇದೇ ಕಾರಣದಿಂದ ಅವರಿಗೆ ದೋಸ್ತಿ ಸರಕಾರದಲ್ಲಿ ಸಚಿವ ಸ್ಥಾನ ನೀಡಲು ಯೋಚಿಸಲಾಗಿತ್ತು. ಉಪ ಚುನಾವಣೆ ಘೋಷಣೆಯಿಂದ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುವಂತಾಗಿದೆ. ಇದು ಪಾಟೀಲ್‌ ಅವರಿಗೆ ಬೇಸರ ತರಿಸಿದ್ದರಿಂದ ಪಕ್ಷದ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ. ಮಂತ್ರಿ ಪದವಿಯ ಮೇಲೆ ಕಣ್ಣಿಟ್ಟಿದ್ದ ಇನ್ನೂ ಹಲವರಿಗೆ ನಿರಾಸೆಯಾಗಿದೆ. ಪಕ್ಷದ ಆಂತರಿಕ ವಲಯದಲ್ಲಿ ಅಂಥವರು ಆಕ್ರೋಶ ವ್ಯಕ್ತಡಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ