ಆ್ಯಪ್ನಗರ

ಕಡೆಗೂ ಸುಧಾಕರ್‌ಗೆ ದಕ್ಕಿದ ಮಾಲಿನ್ಯ ನಿಯಂತ್ರಣ ಮಂಡಳಿ ಪಟ್ಟ

ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಡಾಸುಧಾಕರ್‌ ಅವರಿಗೆ ಕಡೆಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ ಈ ಸಂಬಂಧ ಸರಕಾರ ಆದೇಶ ಹೊರಡಿಸಿದೆ...

Vijaya Karnataka Web 20 Jun 2019, 9:30 pm
ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಡಾ.ಸುಧಾಕರ್‌ ಅವರಿಗೆ ಕಡೆಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ. ಈ ಸಂಬಂಧ ಸರಕಾರ ಆದೇಶ ಹೊರಡಿಸಿದೆ.
Vijaya Karnataka Web ಸುಧಾಕರ್‌
ಸುಧಾಕರ್‌


ಮೈತ್ರಿ ಸರಕಾರದ ಪ್ರಾರಂಭದಲ್ಲೆ ಸುಧಾಕರ್‌ ಅವರಿಗೆ ಈ ಹುದ್ದೆ ನೀಡುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಿತ್ತು. ಆದರೆ, ಈ ಜವಾಬ್ದಾರಿ ನಿಭಾಯಿಸಲು ತಜ್ಞರು ಸೂಕ್ತವೆಂಬ ಕಾರಣ ನೀಡಿದ್ದ ಜೆಡಿಎಸ್‌ ನಾಯಕರು ನಿವೃತ್ತ ಐಎಫ್‌ಎಸ್‌ ಅಧಿಕಾರಿ ಸಿ.ಜಯರಾಂ ಅವರನ್ನು ಅಧ್ಯಕ್ಷರಾಗಿ ನೇಮಿಸಿದ್ದರು.

ಇದರಿಂದ ಅಸಮಾಧಾನಗೊಂಡಿದ್ದ ಸುಧಾಕರ್‌ ಹಲವು ಬಾರಿ ಸಿಎಂ ಕುಮಾರಸ್ವಾಮಿ ವಿರುದ್ಧವೇ ಹೇಳಿಕೆ ನೀಡಿದ್ದರು. ಬಂಡಾಯ ಸಾರುವ ಸುಳಿವನ್ನೂ ನೀಡಿದ್ದರು. ಇತ್ತೀಚೆಗೆ ಸಂಪುಟ ವಿಸ್ತರಿಸುವಾಗ ಇಬ್ಬರು ಪಕ್ಷೇತರರಿಗೆ ಪ್ರಾತಿನಿಧ್ಯ ನೀಡಿದ್ದನ್ನೂ ಪ್ರಶ್ನಿಸಿದ್ದರು. ಇದೀಗ ದೋಸ್ತಿ ಸರಕಾರ ಭದ್ರ ಪಡಿಸಿಕೊಳ್ಳುವ ಭಾಗವಾಗಿ ಸುಧಾಕರ್‌ ಅವರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಟ್ಟ ಕಟ್ಟಲಾಗಿದೆ.

ಅಲ್ಪಕಾಲ ಈ ಹುದ್ದೆಯಲ್ಲಿದ್ದ ಜಯರಾಂ ಅವರಿಂದ ಗುರುವಾರ ಬೆಳಗ್ಗೆ ರಾಜೀನಾಮೆ ಪಡೆದುಕೊಳ್ಳಲಾಗಿದೆ. ಇದರ ಬೆನ್ನಿಗೇ ಸುಧಾಕರ್‌ ನೇಮಕವಾಗಿದೆ. ತಮ್ಮ ನೇಮಕವನ್ನು ಟ್ವೀಟ್‌ ಮೂಲಕ ಖಚಿತ ಪಡಿಸಿರುವ ಸುಧಾಕರ್‌, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಡಿಸಿಎಂ ಜಿ.ಪರಮೇಶ್ವರ ಅವರಿಗೆ ಧನ್ಯವಾದ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ