ಆ್ಯಪ್ನಗರ

ಸಿದ್ದರಾಮಯ್ಯ ಮುಂದೆ ಎಂಬಿ ಪಾಟೀಲ್ ಕಣ್ಣೀರು

ಸಂಭವನೀಯ ಸಚಿವರ ಪಟ್ಟಿಯಲ್ಲಿದ್ದ ಎಂ. ಬಿ. ಪಾಟೀಲ್‌ಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಅವರು ಕಾವೇರಿಗೆ ತೆರಳಿ ಅಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಣ್ಣೀರು ಸುರಿಸಿದ್ದಾರೆ.

Vijaya Karnataka Web 7 Jun 2018, 4:06 pm
ಬೆಂಗಳೂರು: ರಾಜ್ಯ ಸರಕಾರ ಸಂಪುಟ ರಚನೆಯಾಗಿ ಖಾತೆ ಹಂಚಿಕೆಯಾಗುತ್ತಲೇ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಅಸಮಾಧಾನ ಕಾಣಿಸಿಕೊಂಡಿದೆ. ಸಂಭವನೀಯ ಸಚಿವರ ಪಟ್ಟಿಯಲ್ಲಿದ್ದ ಎಂ. ಬಿ. ಪಾಟೀಲ್‌ಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಅವರು ಕಾವೇರಿಗೆ ತೆರಳಿ ಅಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಣ್ಣೀರು ಸುರಿಸಿದ್ದಾರೆ.
Vijaya Karnataka Web M B Patil


ಪಟ್ಟಿಯಲ್ಲಿ ಹೆಸರಿದ್ದರೂ ಕೊನೆ ಗಳಿಗೆಯಲ್ಲಿ ಕೈಬಿಟ್ಟಿದ್ದರಿಂದ ಸಚಿವ ಸ್ಥಾನ ವಂಚಿತನಾಗಿದ್ದೇನೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಅವರು, ಸಮಾಜಕ್ಕಾಗಿ ಮತ್ತು ಪಕ್ಷಕ್ಕಾಗಿ ಸಾಕಷ್ಟು ಶ್ರಮಿಸಿದ್ದರೂ, ಪಕ್ಷ ಕಡೆಗಣಿಸಿದೆ. ಅದು ಸರಿಯಲ್ಲ ಎಂದು ಭಾವೋದ್ವೇಗಕ್ಕೆ ಒಳಗಾಗಿದ್ದಾರೆ.

ನಂತರ ಕಾವೇರಿಯಿಂದ ತೆರಳಿದ ಎಂ. ಬಿ. ಪಾಟೀಲ್ ತಮ್ಮ ನಿವಾಸದಲ್ಲಿ ಪ್ರಮುಖ ನಾಯಕರು ಮತ್ತು ಬೆಂಬಲಿಗರ ಜತೆ ಸಭೆ ನಡೆಸಿದ್ದಾರೆ. ಈ ಮಧ್ಯೆ ಎಂ. ಬಿ. ಪಾಟೀಲ್ ಬೆಂಬಲಿಗರು ಮಾಜಿ ಸಿಎಂ ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಮತ್ತೊಂದೆಡೆ ರೋಷನ್ ಬೇಗ್ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಅವರ ಬೆಂಬಲಿಗರು ಇಲ್ಲಿನ ಕ್ವೀನ್ಸ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ