ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದ ಆರೋಪಿಯಾಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ನ ಏಕ ಸದಸ್ಯ ಪೀಠ ಸೋಮವಾರ ವಜಾಗೊಳಿಸಿದೆ. ಹೀಗಾಗಿ, ಶಾಸಕರನ್ನು ಲೋಕಾಯುಕ್ತ ಪೊಲೀಸರು ಯಾವ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆ ಇದೆ.ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕೈಗಾರಿಕೆಗಳ ನಿಗಮ ( ಕೆಎಸ್ಡಿಎಲ್) ಗುತ್ತಿಗೆ ಕಾರ್ಯದ ಅನುಮತಿ ನೀಡುವ ಸಂದರ್ಭದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಕೆಎಸ್ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯಾಗಿ ಮಾಡಲಾಗಿತ್ತು. ಬಂಧನ ಭೀತಿಯಿಂದ ಶಾಸಕರು ಜಾಮೀನಿಗೆ ಅರ್ಜಿಸಲ್ಲಿಸಿ ಅಲ್ಲಿಯವರೆಗೂ ತಲೆ ಮರೆಸಿಕೊಂಡಿದ್ದರು. ಆನಂತರ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು.
ಐದಾರು ದಿನಗಳು ತಲೆ ಮರೆಸಿಕೊಂಡಿದ್ದ ಶಾಸಕ
ಮಾರ್ಚ್ 2 ರಂದು ಲೋಕಾಯುಕ್ತ ಅಧಿಕಾರಿಗಳು ಮಾಡಾಳ್ ಮಗನ ಕಚೇರಿ, ಮನೆ ಮೇಲೆ ದಾಳಿ ನಡೆಸಿದ್ದರು. ಆನಂತರ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕಿನ ಮಾಡಾಳ್ ಗ್ರಾಮದಲ್ಲಿನ ಶಾಸಕರ ಮನೆಯನ್ನು ಪರಿಶೀಲನೆ ನಡೆಸಿದ್ದರು. ಲೋಕಾಯುಕ್ತ ದಾಳಿ ಮಾಹಿತಿ ಸಿಕ್ಕ ಕೂಡಲೇ ಶಾಸಕ ಮಾಡಾಳ್ ತಲೆ ಮರೆಸಿಕೊಂಡಿದ್ದರು. ಆರು ದಿನಗಳ ಬಳಿಕ ಮಾ.7 ರಂದು ಅವರಿಗೆ ಜಾಮೀನು ಸಿಕ್ಕ ನಂತರ ಕಾಣಿಸಿಕೊಂಡಿದ್ದರು. ಸದ್ಯ ಜಾಮೀನು ಅರ್ಜಿ ವಜಾ ಆಗಿರುವುದರಿಂದ ಮಾಡಾಳ್ ವಿರೂಪಾಕ್ಷ ಅವರು ಮತ್ತೆ ತಲೆಮರೆಸಿಕೊಳ್ಳುವ ಸಾಧ್ಯತೆಯೂ ಇದೆ.
Madal Virupakshappa: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾ; ಬಂಧನ ಭೀತಿ, ಮತ್ತೆ ತಲೆ ಮರೆಸಿಕೊಳ್ಳುತ್ತಾರೆಯೇ ಮಾಡಾಳ್?
Subscribe
BJP MLA Madal Virupakshappa Bribery Case: ಲಂಚ ಸ್ವೀಕಾರ ಆರೋಪ ಹೊಂದಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಶೀಘ್ರದಲ್ಲಿ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ.
ಹೈಲೈಟ್ಸ್:
- ಮಾಡಾಳ್ ವಿರೂಪಾಕ್ಷ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್. ಮತ್ತೆ ಬಂಧನ ಭೀತಿಯಲ್ಲಿ ಶಾಸಕರು.
- ಕೆಎಸ್ಡಿಎಲ್ ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ಮೊದಲ ಆರೋಪಿಯಾಗಿದ್ದರು. ವಯಸ್ಸಿನ ಆಧಾರದಲ್ಲಿ ಮಾ.7ರಂದು ಜಾಮೀನು ಪಡೆದುಕೊಂಡಿದ್ದರು.
- ಸದ್ಯ ಹೈಕೋರ್ಟ್ ಜಾಮೀನು ವಜಾಗೊಳಿಸಿದ್ದು, ಶಾಸಕರನ್ನು ಯಾವ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆಗಳಿವೆ.
ಕಾಮೆಂಟ್ ಮಾಡಿ