ಬೆಂಗಳೂರು : ಕಾಂಗ್ರೆಸ್ ಶಾಸಕ ನಾಗೇಂದ್ರ ಎದೆನೋವಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಕರೆ ಮಾಡಿ ಆರೋಗ್ಯ ವಿಚಾರಿಸಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ.
ಎರಡು ದಿನಗಳ ಹಿಂದೆಯೇ ನಾಗೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಅವರು ಸೋಮವಾರ ಸದನಕ್ಕೆ ಹಾಜರಾಗುವ ಸಾಧ್ಯತೆ ಕಡಿಮೆ. ಆದರೆ ಮೈತ್ರಿ ಸರಕಾರದ ಪರ ಇರುತ್ತೇನೆ ಎಂದು ನಾಗೇಂದ್ರ ಸಿಎಂ ಕುಮಾರಸ್ವಾಮಿಯವರಿಗೆ ಈಗಾಗಲೇ ಭರವಸೆ ನೀಡಿದ್ದಾರೆ. ಇದರ ಮಧ್ಯದಲ್ಲೇ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಆರೋಗ್ಯ ವಿಚಾರಿಸಿರುವುದು ಕುತೂಹಲಕ್ಕೆ ಎಡಮಾಡಿಕೊಟ್ಟಿದೆ.
ಎರಡು ದಿನಗಳ ಹಿಂದೆಯೇ ನಾಗೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಅವರು ಸೋಮವಾರ ಸದನಕ್ಕೆ ಹಾಜರಾಗುವ ಸಾಧ್ಯತೆ ಕಡಿಮೆ. ಆದರೆ ಮೈತ್ರಿ ಸರಕಾರದ ಪರ ಇರುತ್ತೇನೆ ಎಂದು ನಾಗೇಂದ್ರ ಸಿಎಂ ಕುಮಾರಸ್ವಾಮಿಯವರಿಗೆ ಈಗಾಗಲೇ ಭರವಸೆ ನೀಡಿದ್ದಾರೆ. ಇದರ ಮಧ್ಯದಲ್ಲೇ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಆರೋಗ್ಯ ವಿಚಾರಿಸಿರುವುದು ಕುತೂಹಲಕ್ಕೆ ಎಡಮಾಡಿಕೊಟ್ಟಿದೆ.