ಆ್ಯಪ್ನಗರ

ನಾನು ಪಕ್ಷದಲ್ಲೇ ಇರುತ್ತೇನೆ, ಖರ್ಗೆ ಬಗ್ಗೆ ಸಮಯ ಬಂದಾಗ ಮಾತನಾಡುತ್ತೇನೆ: ಉಮೇಶ್‌ ಜಾಧವ್‌

ಮಲ್ಲಿಕಾರ್ಜುನ ಖರ್ಗೆ ದೊಡ್ಡವರು. ಅವರ ಬಗ್ಗೆ ನಾನು ಮಾತಾಡಲ್ಲ. ಸಮಯ ಬಂದಾಗ ಅವರ ಬಗ್ಗೆ ಮಾತಾಡ್ತೀನಿ. ಸ್ಥಳೀಯವಾಗಿ ನನ್ನ ಕ್ಷೇತ್ರದಲ್ಲಿ ಸಮಸ್ಯೆಗಳಿವೆ. ಅದನ್ನು ನಮ್ಮ ನಾಯಕರಿಗೆ ಮನವರಿಕೆ ಮಾಡಿದೀನಿ. ನಾನು ತಪ್ಪು ಮಾಡಿಲ್ಲ

Vijaya Karnataka Web 13 Feb 2019, 12:01 pm
ಬೆಂಗಳೂರು: ಅನರ್ಹತೆ ಭೀತಿ ಎದುರಿಸುತ್ತಿರುವ ಕಾಂಗ್ರೆಸ್‌ ಅತೃಪ್ತ ಬಣದ ಶಾಸಕರಲ್ಲಿ ಗುರುತಿಸಿಕೊಂಡಿದ್ದ ಉಮೇಶ್‌ ಜಾಧವ್‌ ಈಗ ಬೆಂಗಳೂರಿಗೆ ಆಗಮಿಸಿದ್ದಾರೆ.
Vijaya Karnataka Web ಉಮೇಶ್‌ ಜಾಧವ್‌
ಉಮೇಶ್‌ ಜಾಧವ್‌


ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್‌ ಜಾಧವ್‌, ನಾನು ಪಕ್ಷದಲ್ಲೇ ಇರ್ತೇನೆ. ಪಕ್ಷ ಬಿಟ್ಟು ಹೋಗಲ್ಲ, ಇವತ್ತು ಮತದಾನ ಹಾಗಾಗಿ ಬಂದೆ. ನನ್ನ ವೈಯಕ್ತಿಕ ಕಾರಣಕ್ಕಾಗಿ ಶಾಸಕಾಂಗ ಪಕ್ಷದ ಸಭೆಗೆ ಬಂದಿರಲಿಲ್ಲ ಎಂದರು.

ಕಾಂಗ್ರೆಸ್‌ ಹಿರಿಯ ನಾಯಕರ ಜೊತೆ ಮಾತಾಡ್ತೇನೆ. ನಾನು ರಾಜೀನಾಮೆ ಕೊಡೋದಿಲ್ಲ. ಸಿಎಲ್‌ಪಿ ಸಭೆಗೆ ಗೈರು ಹಾಜರಾದ ಬಗ್ಗೆ ಕಾರಣ ಕೊಟ್ಟಿದ್ದೀನಿ. ನನ್ನ ಸ್ಪಷ್ಟನೆಯಲ್ಲಿ ತಪ್ಪು ಇದ್ರೆ ಕ್ರಮ‌ ಕೈಗೊಳ್ಳಲಿ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ದೊಡ್ಡವರು. ಅವರ ಬಗ್ಗೆ ನಾನು ಮಾತಾಡಲ್ಲ. ಸಮಯ ಬಂದಾಗ ಅವರ ಬಗ್ಗೆ ಮಾತಾಡ್ತೀನಿ. ಸ್ಥಳೀಯವಾಗಿ ನನ್ನ ಕ್ಷೇತ್ರದಲ್ಲಿ ಸಮಸ್ಯೆಗಳಿವೆ. ಅದನ್ನು ನಮ್ಮ ನಾಯಕರಿಗೆ ಮನವರಿಕೆ ಮಾಡಿದೀನಿ. ನಾನು ತಪ್ಪು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ನನ್ನ ನಾಯಕ. ನಾನು ಯಾರನ್ನೂ ಭೇಟಿ ಆಗಿಲ್ಲ. ಬಿಜೆಪಿಯಲ್ಲಿ ನನ್ನ ಗೆಳೆಯರಿದ್ದಾರೆ. ಅವರನ್ನು ಸಂಪರ್ಕ ಮಾಡದೇ ಇರಕ್ಕಾಗುತ್ತಾ? ನಾನು ಮುಂಬೈಗೆ ಹೋಗಿರಲಿಲ್ಲ. ಸರಕಾರ ಬೀಳಿಸುವ ಕೆಲಸ ಮಾಡಿಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದರು.

ನನ್ನ ಕ್ಷೇತ್ರದ ಮತದಾರರಿಗೆ ನಾನು ಸಚಿವನಾಗಬೇಕೆಂಬ ಹಂಬಲ ಇದೆ. ಇವತ್ತು ಬಜೆಟ್ ದಿನ. ಮತದಾನ ಮಾಡಬೇಕು. ನಾವು ಇವತ್ತೂ ಬಂದಿಲ್ಲ ಅನ್ನುವ ಕಳಂಕ ಹೊತ್ಕೊಳ್ಳೋಕೆ ನಾನು ಸಿದ್ಧ ಇಲ್ಲ ಎಂದು ಉಮೇಶ್ ಜಾಧವ್ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ