ಆ್ಯಪ್ನಗರ

ಯಡಿಯೂರಪ್ಪ ಭೇಟಿಯಾದ ಅತೃಪ್ತರು

ಸಚಿವ ಸಂಪುಟದಲ್ಲಿ ಸ್ಥಾನ ಲಭಿಸದ ಬಿಜೆಪಿಯ ಕೆಲ ಅತೃಪ್ತ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

Vijaya Karnataka 29 Aug 2019, 5:00 am
ಬೆಂಗಳೂರು: ಸಚಿವ ಸಂಪುಟದಲ್ಲಿ ಸ್ಥಾನ ಲಭಿಸದ ಬಿಜೆಪಿಯ ಕೆಲ ಅತೃಪ್ತ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
Vijaya Karnataka Web mlas met yadiyurappa
ಯಡಿಯೂರಪ್ಪ ಭೇಟಿಯಾದ ಅತೃಪ್ತರು


ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಶಾಸಕರಾದ ಗೂಳಿಹಟ್ಟಿ ಶೇಖರ್‌ ಹಾಗೂ ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ಬುಧವಾರ ಬೆಳಗ್ಗೆ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಗೂಳಿಹಟ್ಟಿ ಶೇಖರ್‌ ನಿರಾಕರಿಸಿದ್ದಾರೆ.

ತಿಪ್ಪಾರೆಡ್ಡಿ ಮಾತನಾಡಿ, ''ಮೂವರು ಡಿಸಿಎಂ ಸೃಷ್ಟಿ ವಿಚಾರದಲ್ಲಿ ನಮ್ಮ ಅಸಮಾಧಾನವಿಲ್ಲ. ಹೈಕಮಾಂಡ್‌ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರು. ಯಡಿಯೂರಪ್ಪ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ,'' ಎಂದು ಸ್ಪಷ್ಟನೆ ನೀಡಿದ್ದಾರೆ.

ಆದರೆ ಲಕ್ಷ್ಮಣ ಸವದಿಗೆ ಡಿಸಿಎಂ ನೀಡಿದ ಹಿನ್ನೆಲೆಯಲ್ಲಿ ಇನ್ನಷ್ಟು ಮುನಿಸಿಕೊಂಡಿರುವ ಉಮೇಶ್‌ ಕತ್ತಿ ಮಾತ್ರ ಇನ್ನೂ ಸಮಾಧಾನಗೊಂಡಿಲ್ಲ. ಅವರನ್ನು ಮನವೊಲಿಸುವ ಪ್ರಯತ್ನವನ್ನು ಯಡಿಯೂರಪ್ಪ ನಡೆಸುತ್ತಲೇ ಇದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ