ಆ್ಯಪ್ನಗರ

ಸಿಎಂ ಸಭೆಗಳಲ್ಲಿ ಮೊಬೈಲ್‌ ಬಳಕೆ ನಿಷೇಧ

ಸಿಎಂ ಕುಮಾರಸ್ವಾಮಿ ಅವರು ಭಾಗವಹಿಸುವ ಸಭೆಗಳಲ್ಲಿ ಮೊಬೈಲ್‌ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ...

Vijaya Karnataka 1 Jun 2018, 8:47 pm
ಬೆಂಗಳೂರು : ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭಾಗವಹಿಸುವ ಸಭೆಗಳಲ್ಲಿ ಮೊಬೈಲ್‌ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ.
Vijaya Karnataka Web ಕುಮಾರಸ್ವಾಮಿ
ಕುಮಾರಸ್ವಾಮಿ


ಈ ಸಂಬಂಧ ಖುದ್ದು ಸಿಎಂ ರಾಜ್ಯ ಮುಖ್ಯ ಕಾರ್ಯದರ್ಶಿ ಮೂಲಕ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

''ಇತ್ತೀಚಿನ ದಿನಗಳಲ್ಲಿ ಸಭೆಗಳಲ್ಲಿ ಭಾಗವಹಿಸುವವರು ಮೊಬೈಲ್‌ ಬಳಕೆ ಮಾಡುವುದು ಹೆಚ್ಚಿದ್ದು, ಇದರಿಂದ ಸಭೆಯ ನಡಾವಳಿ ಹಾಗೂ ಚರ್ಚೆಯ ಪ್ರಾಮುಖ್ಯತೆ ಕಡಿಮೆಯಾಗುವುದು ಗಮನಕ್ಕೆ ಬಂದಿದೆ. ಹೀಗಾಗಿ ಇನ್ನುಮುಂದೆ ಮುಖ್ಯಮಂತ್ರಿಗಳ ನಿಗದಿತ ಸಭೆಗಳಲ್ಲಿ ಭಾಗವಹಿಸುವ ಎಲ್ಲರೂ ಮೊಬೈಲ್‌ಗಳನ್ನು ತರಬಾರದು. ಒಂದುವೇಳೆ, ಮೊಬೈಲ್‌ ತಂದಿದ್ದರೆ ಸಭೆಯ ಸಮನ್ವಯಾಧಿಕಾರಿಗೆ ಒಪ್ಪಿಸಿ, ಸಭೆ ಮುಗಿದ ಬಳಿಕ ವಾಪಸ್‌ ಪಡೆದುಕೊಳ್ಳಬೇಕು. ಸಭೆಯಲ್ಲಿ ಮಹತ್ವದ ವಿಚಾರಗಳ ಬಗ್ಗೆ ಪೂರ್ಣ ಗಮನ ಕೇಂದ್ರೀಕರಿಸಿ ಉತ್ತಮ ನಿರ್ಣಯ ಕೈಗೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ'' ಎಂದು ಆದೇಶದಲ್ಲಿ ತೀರ್ಮಾನದ ಆಶಯವನ್ನು ವಿವರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ