ಬೆಂಗಳೂರು: ಕಳೆದ ಒಂದು ವರ್ಷದಿಂದ ಬಿಜೆಪಿಯವರು ಸರಕಾರವನ್ನು ಬೀಳಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಎಸ್ಸಿ/ಎಸ್ಟಿ ಗುತ್ತಿಗೆದಾರರ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದರು.
ಸರಕಾರವನ್ನು ಬೀಳಿಸುವ ಪ್ರಯತ್ನದಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಲಾರರು ಎಂದರು.
ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಮತ್ತು ಆನಂದ್ ಸಿಂಗ್ ಜತೆ ಮಾತನಾಡಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.
ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ಬಿಜೆಪಿ ಸೇರುವುದಿಲ್ಲ. ಅವರಿಗೆ ಕೆಲವು ಅಸಮಾಧಾನ ಆಗಿರಬಹುದು. ಅದನ್ನು ಮಾತುಕತೆ ಮೂಲಕ ಬಗೆಹರಿಸಲಾಗುವುದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಎಸ್ಸಿ/ಎಸ್ಟಿ ಗುತ್ತಿಗೆದಾರರ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದರು.
ಸರಕಾರವನ್ನು ಬೀಳಿಸುವ ಪ್ರಯತ್ನದಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಲಾರರು ಎಂದರು.
ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಮತ್ತು ಆನಂದ್ ಸಿಂಗ್ ಜತೆ ಮಾತನಾಡಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.
ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ಬಿಜೆಪಿ ಸೇರುವುದಿಲ್ಲ. ಅವರಿಗೆ ಕೆಲವು ಅಸಮಾಧಾನ ಆಗಿರಬಹುದು. ಅದನ್ನು ಮಾತುಕತೆ ಮೂಲಕ ಬಗೆಹರಿಸಲಾಗುವುದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.