ಆ್ಯಪ್ನಗರ

ಆಯುಷ್ಮಾನ್ ಭಾರತ್‌ ಯೋಜನೆ: ಖಾಸಗಿ ಆಸ್ಪತ್ರೆಗಳಿಗೇಕೆ ಆತಂಕ?

ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆ ವಿಶ್ವದಲ್ಲಿಯೇ ಒಂದು ದೊಡ್ಡ ಮಟ್ಟದ ಯೋಜನೆ ಎಂದು ಹೇಳಿದರೆ, ತಪ್ಪಾಗಲಾರದು.

TIMESOFINDIA.COM 30 Sep 2018, 12:39 pm
ಬೆಂಗಳೂರು: ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆ ವಿಶ್ವದಲ್ಲಿಯೇ ಒಂದು ದೊಡ್ಡ ಮಟ್ಟದ ಯೋಜನೆ ಎಂದು ಹೇಳಿದರೆ, ತಪ್ಪಾಗಲಾರದು. ಹೌದು, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತವಾಗಿ 5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ವಿಮೆ ನೀಡುವ ಉದ್ದೇಶ ಈ ಯೋಜನೆಯದ್ದಾಗಿದೆ. ಆದರೆ, ಯೋಜನೆಯಲ್ಲಿ ಉಲ್ಲೇಖಿಸಿರುವಂತೆ ಚಿಕಿತ್ಸೆಗೆ ನಿಗದಿಪಡಿಸಿದ ದರ ಕಡಿಮೆ ಎಂದು ಖಾಸಗಿ ಆಸ್ಪತ್ರೆಗಳು ಕಳವಳ ವ್ಯಕ್ತಪಡಿಸಿವೆ.
Vijaya Karnataka Web hospital


ಹೌದು, ಯೋಜನೆಯ ಅಡಿಯಲ್ಲಿ ಸಿಸೇರಿಯನ್ ಹೆರಿಗೆಗೆ ಕೇವಲ 9 ಸಾವಿರ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ. ಆದರೆ, ಖಾಸಗಿ ಆಸ್ಪತ್ರೆಯಲ್ಲಿ ಇದಕ್ಕೆ 35 ರಿಂದ 65 ಸಾವಿರ ರೂಪಾಯಿ ಖರ್ಚಾಗುತ್ತದೆ. ಏಕೆಂದರೆ, ಹೆರಿಗೆ ಬಳಿಕ ಬಾಣಂತಿಯರು ಮೂರು-ನಾಲ್ಕು ದಿನ ಆಸ್ಪತ್ರೆಯಲ್ಲೇ ಇರಬೇಕಾಗುತ್ತದೆ. ಹೀಗಾಗಿ ಖರ್ಚು ವೆಚ್ಚ ಅಧಿಕವಾಗುತ್ತದೆ ಎಂದು ಖಾಸಗಿ ಆಸ್ಪತ್ರೆಗಳು ಹೇಳಿಕೊಂಡಿವೆ.

ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಚಿಕಿತ್ಸೆ ನಿಗದಿ ಪಡಿಸಿರುವ ದರ ಕಡಿಮೆ ಎಂದು ಖಾಸಗಿ ಆಸ್ಪತ್ರೆಗಳ ಆತಂಕಕ್ಕೆ ಕಾರಣವಾಗಿದೆ.

ಈ ವಿಷಯವನ್ನು ಅಸೋಸಿಯೇಷನ್ ಆಫ್ ಹೆಲ್ತ್‌ಕೇರ್ ಪ್ರೊವೈಡರ್ಸ್ ಇಂಡಿಯಾ (ಎಎಚ್‌ಪಿಐ) ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ನೀತಿ ಆಯೋಗಕ್ಕೆ ಮನವರಿಕೆ ಮಾಡಿಕೊಟ್ಟಿದೆ.

'ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ನಿಗದಿಪಡಿಸಿರುವ ಬೆಲೆ ಗೊಂದಲ ಹುಟ್ಟಿಸಿದೆ. ಸಿಸೇರಿಯನ್ ಹೆರಿಗೆಗೆ ಕೇವಲ 9 ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ. ಆದರೆ, ಇದಕ್ಕೆ 35-65 ಸಾವಿರ ರೂಪಾಯಿ ಖರ್ಚಾಗುತ್ತದೆ. ಹಾಗಾದರೆ ಬಾಕಿ ಹಣವನ್ನು ವಾಪತಿಸುವವರು ಯಾರು? ಎಂದು ಬೆಂಗಳೂರಿನ ಸ್ತ್ರೀರೋಗ ತಜ್ಞರೊಬ್ಬರು ಪ್ರಶ್ನಿಸಿದ್ದಾರೆ.

ಆಯುಷ್ಮಾನ್ ಭಾರತ್‌ ಅಡಿ ವೆಚ್ಚಗಳನ್ನು ಭರಿಸುವ ವಿಚಾರದಲ್ಲಿ, ಐಸಿಯುನಲ್ಲಿ ರೋಗಿಗಳ ನಿರ್ವಹಣಾ ವೆಚ್ಚ ಸೇರಿಲ್ಲ. 'ಆಯುಷ್ಮಾನ್ ಭಾರತ್‌ ಅಡಿಯಲ್ಲಿ ಎಲ್ಲ ವೆಚ್ಚಗಳೂ ಸೇರುವುದಿಲ್ಲ ಎಂಬುದನ್ನು ರೋಗಿಗಳಿಗೆ ಸ್ಪಷ್ಟವಾಗಿ ತಿಳಿಸಬೇಕು' ಎಂದು ಡಾ. ಮಂಜುನಾಥ್‌ ಹೇಳಿದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ