ಆ್ಯಪ್ನಗರ

ಮೋದಿವಾದ ಗಾಂಧಿವಾದಕ್ಕೆ ವಿರುದ್ದ: ಡಿಸಿಎಂ ಪರಮೇಶ್ವರ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ದೊರೆತು ಮೋದಿ ಪುನಃ ಪ್ರಧಾನಿಯಾದರೆ ದೇಶದ ಹಿತಕ್ಕೆ ಕಂಟಕವಾಗಲಿದೆ ಎಂದು ಡಿಸಿಎಂ ಜಿ. ಪರಮೇಶ್ವರ ಆತಂಕ ವ್ಯಕ್ತಪಡಿಸಿದ್ದಾರೆ.

Vijaya Karnataka 3 Oct 2018, 8:44 am
ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ದೊರೆತು ಮೋದಿ ಪುನಃ ಪ್ರಧಾನಿಯಾದರೆ ದೇಶದ ಹಿತಕ್ಕೆ ಕಂಟಕವಾಗಲಿದೆ ಎಂದು ಡಿಸಿಎಂ ಜಿ. ಪರಮೇಶ್ವರ ಆತಂಕ ವ್ಯಕ್ತಪಡಿಸಿದ್ದಾರೆ.
Vijaya Karnataka Web modis argument against gandhis argument dcm parameshwar
ಮೋದಿವಾದ ಗಾಂಧಿವಾದಕ್ಕೆ ವಿರುದ್ದ: ಡಿಸಿಎಂ ಪರಮೇಶ್ವರ


ಕಾಂಗ್ರೆಸ್‌ ಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ''ಗಾಂಧಿವಾದ ಮತ್ತು ಮೋದಿವಾದದ ಬಗ್ಗೆ ಚರ್ಚೆಯಾಗುತ್ತಿದೆ. ಗಾಂಧಿವಾದ ವಿಶ್ವಕ್ಕೆ ಮಾದರಿಯಾಗಿದೆ. ಸರ್ವಧರ್ಮ ಸಹಿಷ್ಣುತೆ ಹಾಗೂ ಎಲ್ಲರನ್ನೂ ಸಮಾನವಾಗಿ ಕಾಣುವುದು ಗಾಂಧಿವಾದ. ಮೋದಿವಾದ ಇದಕ್ಕೆ ವಿರುದ್ಧವಾಗಿದೆ. ಧರ್ಮ ಧರ್ಮಗಳ ನಡುವೆ ಮೋದಿಯವರು ಕಂದಕ ಸೃಷ್ಟಿಸುತ್ತಿದ್ದಾರೆ,'' ಎಂದು ವ್ಯಾಖ್ಯಾನ ಮಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲಕ್ಷ್ಮೇ ಹೆಬ್ಬಾಳ್ಕರ್‌ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್‌ ಅವರು ಗಾಂಧಿ ಜಯಂತಿ ಹಾಗೂ ಲಾಲ್‌ಬಹದ್ದೂರ್‌ ಶಾಸ್ತ್ರಿ ದಿನಾಚರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಹಾಗೂ ಶಾಸ್ತ್ರಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ