ಆ್ಯಪ್ನಗರ

ಮೊಹಮ್ಮದ್‌ ಮೊಹ್ಸಿನ್‌ ಪ್ರಕರಣ:ಹೈಕೋರ್ಟ್‌ಗೆ ಚುನಾವಣಾ ಆಯೋಗ ಮೊರೆ

ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತಪಾಸಣೆ ಮಾಡಿದ್ದ ಐಎಎಸ್‌ ಅಧಿಧಿಕಾರಿ ಮೊಹಮದ್‌ ಮೊಹ್ಸಿನ್‌ ವಿರುದ್ಧ ಇಲಾಖಾ ವಿಚಾರಣೆ ನಡೆಸುವ ಆದೇಶಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸಿಎಟಿ ನೀಡಿರುವ ಆದೇಶವನ್ನು ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ.

Vijaya Karnataka 17 May 2019, 5:00 am
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತಪಾಸಣೆ ಮಾಡಿದ್ದ ಐಎಎಸ್‌ ಅಧಿಧಿಕಾರಿ ಮೊಹಮದ್‌ ಮೊಹ್ಸಿನ್‌ ವಿರುದ್ಧ ಇಲಾಖಾ ವಿಚಾರಣೆ ನಡೆಸುವ ಆದೇಶಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸಿಎಟಿ ನೀಡಿರುವ ಆದೇಶವನ್ನು ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ.
Vijaya Karnataka Web mohammad mohisin case filled in high court
ಮೊಹಮ್ಮದ್‌ ಮೊಹ್ಸಿನ್‌ ಪ್ರಕರಣ:ಹೈಕೋರ್ಟ್‌ಗೆ ಚುನಾವಣಾ ಆಯೋಗ ಮೊರೆ


ಸಿಎಟಿ ಏ.29ರಂದು ಸಿಎಟಿ ನೀಡಿರುವ ಆದೇಶ ತೆರವು ಕೋರಿ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯ ಮನವಿ ಆಲಿಸಿದ ನ್ಯಾ.ಜಾನ್‌ ಮೈಕೆಲ್‌ ಕುನ್ಹಾ ಮತ್ತು ನ್ಯಾ.ಎಚ್‌.ಟಿ.ನರೇಂದ್ರ ಪ್ರಸಾದ್‌ ಅವರಿದ್ದ ರಜಾ ಕಾಲದ ವಿಶೇಷ ವಿಭಾಗೀಯ ಪೀಠ, ರಾಜ್ಯ ಮತ್ತು ಕೇಂದ್ರ ಸರಕಾರ ಎರಡಕ್ಕೂ ನೋಟಿಸ್‌ ನೀಡಿ ವಿಚಾರಣೆ ಮುಂದೂಡಿತು.

''ಸಿಎಟಿ ಮೊಹಮ್ಮದ್‌ ಮೊಹ್ಸಿನ್‌ ಯಾವುದೇ ಅಧಿಕಾರವಿಲ್ಲದೆ ಪ್ರಧಾನಿ ಅವರ ಹೆಲಿಕಾಪ್ಟರ್‌ ತಪಾಸಣೆಗೆ ಆದೇಶ ನೀಡಿದ್ದರು ಎಂಬ ಅಂಶವನ್ನು ಪರಿಗಣಿಸಿಲ್ಲ. ಆ ಮೂಲಕ ಆಯೋಗ 2014 ಹಾಗೂ 2019ರಲ್ಲಿ ಎಸ್‌ಪಿಜಿ ಶಿಷ್ಟಾಚಾರ ಪಾಲನೆ ಸಂಬಂಧ ನೀಡಿದ್ದ ನಿರ್ದೇಶನಗಳನ್ನು ಮತ್ತು ನಿಯಮಗಳನ್ನು ಉಲ್ಲಂಘಿಸಿದ್ದಾರೆ''ಎಂದು ಚುನಾವಣಾ ಆಯೋಗ ಹೇಳಿದೆ.

ಅಲ್ಲದೆ, ಮೊಹ್ಸಿನ್‌ ವಿರುದ್ಧದ ಇಲಾಖಾ ವಿಚಾರಣಾ ಆದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿರುವುದು ಇಡೀ ಚುನಾವಣೆಯ ಮೇಲೆ ಪರಿಣಾಮ ಬೀರಿದೆ. ಇದರಿಂದ ಚುನಾವಣಾ ಆಯೋಗದ ನಿರ್ದೇಶನಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದೂ ತಿಳಿಸಿದೆ.

ಒಡಿಶಾದ ಸಂಬಾಲ್‌ಪುರ್‌ನಲ್ಲಿ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಮೊಹಮ್ಮದ್‌ ಮೊಹ್ಸಿನ್‌ ಏ.16ರಂದು ಪ್ರಧಾನಿಯವರ ಹೆಲಿಕಾಪ್ಟರ್‌ ತಪಾಸಣೆ ಮಾಡಿದ್ದಕ್ಕೆ ಕೆಂಗಣ್ಣಿಗೆ ಗುರಿಯಾಗಿದ್ದರು. ಎಸ್‌ಪಿಜಿ ಭದ್ರತೆ ಹೊಂದಿರುವ ಪ್ರಧಾನಿ ಪ್ರಯಾಣಿಸುವ ಹೆಲಿಕಾಪ್ಟರ್‌ ತಪಾಸಣೆ ಮಾಡುವಂತಿರಲಿಲ್ಲ ಎಂದು ಚುನಾವಣಾ ಆಯೋಗ ಹೇಳಿತ್ತು.

ಮೊದಲಿಗೆ ಚುನಾವಣಾ ಆಯೋಗ ಏ.16ರಂದು ಚುನಾವಣಾ ಕರ್ತವ್ಯದಿಂದ ಅಮಾನತುಗೊಳಿಸಿತ್ತು. ನಂತರ ಏ.25ರಂದು ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಇಲಾಖಾ ವಿಚಾರಣೆಗೆ ಶಿಫಾರಸು ಮಾಡಿತ್ತು. ಏ.25ರಂದೇ ಸಿಎಟಿ ಅವರ ಅಮಾನತು ಆದೇಶಕ್ಕೆ ತಡೆ ನೀಡಿತ್ತು. ನಂತರ ಏ.29ರಂದು ಇಲಾಖಾ ವಿಚಾರಣಾ ಕುರಿತಂತೆಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ