ಆ್ಯಪ್ನಗರ

ನಲಪಾಡ್‌ ಜಾಮೀನು ಅರ್ಜಿ ಮತ್ತೆ ವಜಾ

ಶಾಸಕ ಎನ್‌.ಎ ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ಗೆ ಬೆಂಗಳೂರು ಸೆಷನ್ಸ್‌ ನ್ಯಾಯಾಲಯ ಮತ್ತೆ ಜಾಮೀನು ನೀಡಲು ನಿರಾಕರಿಸಿದೆ.

Vijaya Karnataka Web 30 May 2018, 5:33 pm
ಬೆಂಗಳೂರು: ಶಾಸಕ ಎನ್‌.ಎ ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ಗೆ ಬೆಂಗಳೂರು ಸೆಷನ್ಸ್‌ ನ್ಯಾಯಾಲಯ ಮತ್ತೆ ಜಾಮೀನು ನೀಡಲು ನಿರಾಕರಿಸಿದೆ.
Vijaya Karnataka Web nalapad


ಫರ್ಜಿ ಕೆಫೆಯಲ್ಲಿ ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌, ಪ್ರಭಾವಿಯಾಗಿದ್ದು, ಸಾಕ್ಷ್ಯ ನಾಶಪಡಿಸುವ ಸಾಧ್ಯತೆಗಳು ಹೆಚ್ಚಿವೆ. ನ್ಯಾಯಾಲಯ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಹಿಂದೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ವೇಳೆ ನ್ಯಾಯಾಲಯ ಹಲ್ಲೆ ನಡೆಸಿದ ವೀಡಿಯೋ ದೃಶ್ಯಾವಳಿಗಳನ್ನು ಗಮನಿಸಿದ್ದು, ಅತ್ಯಂತ ಗಂಭೀರವಾಗಿರುವುದಾಗಿ ಅಭಿಪ್ರಾಯಪಟ್ಟಿದೆ. ಹೀಗಾಗಿ ನಲಪಾಡ್‌ ಜಾಮೀನು ಪಡೆಯಲು ಅರ್ಹವಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟು, ಅರ್ಜಿ ತಿರಸ್ಕರಿಸಿದೆ ಎಂದು ಸರಕಾರಿ ಅಭಿಯೋಜಕ ಶ್ಯಾಮಸುಂದರ್‌ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದರೂ, ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಮೂರು ತಿಂಗಳಿನಿಂದ ನಲಪಾಡ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾಮೀನು ನೀಡುವಂತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಲಪಾಡ್‌ ಹ್ಯಾರಿಸ್‌ಗೆ ಅವಕಾಶವಿರಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ