ಆ್ಯಪ್ನಗರ

ಮೋಹನ್‌ ನ್ಯಾಯಾಂಗ ಬಂಧನಕ್ಕೆ

ವಿಧಾನಸೌಧ ಆವರಣದಲ್ಲಿ 25.76 ಲಕ್ಷ ರೂ. ಪತ್ತೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಮೋಹನ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿದೆ.

Vijaya Karnataka 12 Jan 2019, 5:00 am
ಬೆಂಗಳೂರು :ವಿಧಾನಸೌಧ ಆವರಣದಲ್ಲಿ 25.76 ಲಕ್ಷ ರೂ. ಪತ್ತೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಮೋಹನ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿದೆ.
Vijaya Karnataka Web money trap icident
ಮೋಹನ್‌ ನ್ಯಾಯಾಂಗ ಬಂಧನಕ್ಕೆ


ಎರಡು ದಿನಗಳ ಕಸ್ಟಡಿ ವಿಚಾರಣೆ ಮುಕ್ತಾಯಗೊಂಡ ಕಾರಣ ಎಸಿಬಿ ಪೊಲೀಸರು, ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೇ ವೇಳೆ ಆರೋಪಿ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಗೆ ತಕರಾರು ಸಲ್ಲಿಸುವಂತೆ ಎಸಿಬಿ ಪೊಲೀಸರಿಗೆ ಸೂಚಿಸಿದ ನ್ಯಾಯಾಲಯ, ವಿಚಾರಣೆಯನ್ನು ಜ.14ಕ್ಕೆ ಮುಂದೂಡಿದೆ.

ಹಳೇ ನೌಕರರ ವಿಚಾರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕಚೇರಿಯಲ್ಲಿ ಈ ಹಿಂದೆ ಕೆಲಸ ಮಾಡಿ ಬಿಟ್ಟು ಹೋಗಿರುವ ನೌಕರರಾದ ಮಂಜುನಾಥ ಮತ್ತು ಕೃಷ್ಣಪ್ಪ ಎಂಬುವರನ್ನು ಎಸಿಬಿ ಪೊಲೀಸರು ವಿಚಾರಣೆ ನಡೆಸಿದರು.

''ನಾವು ಯಾವುದೇ ಹಣ ಸಾಗಣೆ ಕೆಲಸ ಮಾಡುವುದಿಲ್ಲ. ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದೇವೆ. ಅಕ್ರಮದ ಕುರಿತು ನಮಗೆ ಏನೂ ಮಾಹಿತಿ ಇಲ್ಲ'' ಎಂದು ವಿಚಾರಣೆ ವೇಳೆ ಹೇಳಿದ್ದಾರೆ. ಸಚಿವರ ಕಚೇರಿ ನೌಕರರಾದ ಕೃಷ್ಣಮೂರ್ತಿ, ಅನಂತು, ಹಾಗೂ ನಂದ, ಶ್ರೀನಿಧಿ ಮತ್ತು ಮಂಜುನಾಥ ಎಂಬುವರು ಶುಕ್ರವಾರ ಕೂಡಾ ವಿಚಾರಣೆಗೆ ಹಾಜರಾಗಿಲ್ಲ. ಎಲ್ಲರೂ ತಲೆಮರೆಸಿಕೊಂಡಿರುವ ಶಂಕೆ ಇದೆ. ಅವರ ಪತ್ತೆಗೆ ಶೋಧ ನಡೆದಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ