ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ದೋಷಿ ಎಂದು ಪರಿಗಣಿಸಿ ಎರಡು ವರ್ಷ ಶಿಕ್ಷೆ ನೀಡಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ನೈತಿಕ ಬೆಂಬಲ ನೀಡಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು. ನಗರದ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆಯ ಬಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೌನ ಪ್ರತಿಭಟನೆಯನ್ನು ನಡೆಸಿದರು.
Congress Protest: ರಾಹುಲ್ ಗಾಂಧಿಗೆ ನೈತಿಕ ಬೆಂಬಲ; ಗಾಂಧಿ ಪ್ರತಿಮೆಯ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಮೌನ ಪ್ರತಿಭಟನೆ
Congress Protest: ರಾಹುಲ್ ಗಾಂಧಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಸೇರಿ ಹಲವರು ಭಾಗಿಯಾಗಿದ್ದರು.
Authored byಇರ್ಷಾದ್ ಉಪ್ಪಿನಂಗಡಿ | Edited by ಜಯಪ್ರಕಾಶ್ ಬಿರಾದಾರ್ | Vijaya Karnataka Web 23 Mar 2023, 11:34 pm
ಹೈಲೈಟ್ಸ್:
- ಎರಡು ವರ್ಷ ಶಿಕ್ಷೆ ನೀಡಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ನೈತಿಕ ಬೆಂಬಲ ನೀಡಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೌನ ಪ್ರತಿಭಟನೆ.
- ಕೇಂದ್ರ ಸರ್ಕಾರ ಸಂವಿಧಾನದತ್ತ ಸಂಸ್ಥೆಗಳನ್ನೇ ದುರುಪಯೋಗ ಪಡಿಸಿಕೊಳ್ಳುವುದರ ಮೂಲಕ ವಿರೋಧ ಪಕ್ಷಗಳನ್ನು ಹತ್ತಿಕ್ಕುತ್ತಿದೆ ಎಂದು ಆರೋಪ.
- ಧೈರ್ಯವನ್ನು ಕುಗ್ಗಿಸಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂಬುದು ಭಾರತ್ ಜೋಡೋ ಯಾತ್ರೆ ಮೂಲಕ ಸಾಬೀತಾಗಿದೆ ಎಂದು ಕಿಡಿಕಾರಿದ ಕಾರ್ಯಕರ್ತರು.