ಆ್ಯಪ್ನಗರ

ಶ್ರೀಲಂಕಾ ಬಾಂಬ್‌ ಸ್ಫೋಟ: ಕನ್ನಡಿಗರ ಪಾರ್ಥಿವ ಶರೀರ ಶೀಘ್ರ ತವರಿಗೆ

ಶ್ರೀಲಂಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ನಮ್ಮ ಪಕ್ಷದ ಶಾಸಕರು, ಮಾಜಿ ಶಾಸಕರು ಶ್ರೀಲಂಕಾಕ್ಕೆ ಹೋಗಿದ್ದಾರೆ. ಮೃತದೇಹಗಳನ್ನು ರಾಜ್ಯಕ್ಕೆ ಕರೆತರಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ

Vijaya Karnataka Web 23 Apr 2019, 8:25 pm
ಹಾಸನ: ಶ್ರೀಲಂಕಾ ಬಾಂಬ್ ಸ್ಪೋಟ ಘಟನೆಯಲ್ಲಿ ರಾಜ್ಯದ ಪ್ರವಾಸಿಗರು ಸಾವಿಗೀಡಾಗಿದ್ದು, ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯರಾತ್ರಿ ಅಥವಾ ಬುಧವಾ ಬೆಳಗಿನ ಜಾವ ತವರಿಗೆ ಕರೆತರಲಾಗುವುದು.
Vijaya Karnataka Web ಲಂಕಾ ಸ್ಫೋಟ
ಲಂಕಾ ಸ್ಫೋಟ


ಈ ಕುರಿತು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಚನ್ನರಾಯಪಟ್ಟಣದಲ್ಲಿ ಮಾಹಿತಿ ನೀಡಿದ್ದಾರೆ.

ಶ್ರೀಲಂಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ನಮ್ಮ ಪಕ್ಷದ ಶಾಸಕರು, ಮಾಜಿ ಶಾಸಕರು ಶ್ರೀಲಂಕಾಕ್ಕೆ ಹೋಗಿದ್ದಾರೆ. ಮೃತದೇಹಗಳನ್ನು ರಾಜ್ಯಕ್ಕೆ ಕರೆತರಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಎಲ್ಲಾ ಮೃತದೇಹಗಳನ್ನು ಒಂದೇ ಭಾರಿ ತರಲು ಸಾಧ್ಯವಿಲ್ಲ. ಸರ್ಕಾರದ ಕಡೆಯಿಂದ ಎಲ್ಲಾ ಪ್ರಯತ್ನ ಮಾಡಲಾಗಿದೆ ಎಂದರು.

ಮಂಗಳವಾರ ರಾತ್ರಿ ಒಂದು ಪಾರ್ಥಿವ ಶರೀರ ಬೆಂಗಳೂರಿಗೆ ಕರೆಲಾಗುವುದು. ಉಳಿದ ನಾಲ್ಕು ಪಾರ್ಥಿವ ಶರೀರ ಬುಧವಾರ ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಲಂಕಾ ವಿಮಾನದಲ್ಲಿ ಆಗಮಿಸುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ