ಆ್ಯಪ್ನಗರ

ಮಂತ್ರಿಗಿರಿ ಕೈ ತಪ್ಪಿದ್ದಕ್ಕಾಗಿ ಬೇಸರ, ಅರುಣ್ ಸಿಂಗ್‌ಗೆ ಮನವಿ ಮಾಡಿದ ಎಂಪಿ ರೇಣುಕಾಚಾರ್ಯ

ಮಂತ್ರಿಗಿರಿ ಕೈ ತಪ್ಪಿದ್ದಕ್ಕಾಗಿ ಶಾಸಕ ಎಂಪಿ ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಎಂಎಲ್‌ಸಿ ಸಿ.ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಿದ್ದಕ್ಕಾಗಿ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಮತ್ತಷ್ಟು ಮಾಹಿತಿ ಇಲ್ಲಿದೆ.

Vijaya Karnataka Web 13 Jan 2021, 12:05 pm
ಬೆಂಗಳೂರು: ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಚಿವ ಸ್ಥಾನ ಕೈತಪ್ಪಿದ ಆಕಾಂಕ್ಷಿಗಳು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಬಿಜೆಪಿ ರಾಜ್ಯ ಉಸ್ತುವಾರಿ ಸಚಿವ ಅರುಣ್ ಸಿಂಗ್ ಮುಂದೆ ಮಂತ್ರಿಗಿರಿಗಾಗಿ ಮನವಿ ಮಾಡಿಕೊಂಡಿದ್ದಾರೆ.
Vijaya Karnataka Web mp reanukacharya 1


ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ಎಂಪಿ ರೇಣುಕಾಚಾರ್ಯ ಕೆಲಹೊತ್ತು ಪ್ರತ್ಯೇಕವಾಗಿ ಮಾತನಾಡಿದರು.

ಬ್ರೇಕಿಂಗ್ ನ್ಯೂಸ್: ನೂತನ ಸಚಿವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದ ಬಿಎಸ್‌ವೈ

ಈ ವೇಳೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಅವರಲ್ಲಿ ತಮ್ಮ ನೋವು ತೋಡಿಕೊಂಡು ಮುಂದಿನ ದಿನಗಳಲ್ಲಿ ಪರಿಗಣಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಾದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಐದು ಮಂದಿ ವಿಧಾನಪರಿಷತ್‌ ಸದಸ್ಯರಿಗೆ ಅವಕಾಶ ಇದೇ ಮೊದಲ ಬಾರಿ ನೀಡಲಾಗಿದೆ. ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಪ್ರಾದೇಶಿಕವಾಗಿ ಅವಕಾಶ ನೀಡಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಅಲ್ಲದೆ ನನಗೆ ಸಚಿವ ಸ್ಥಾನ ನೀಡದೇ ಇರುವುದರಿಂದ ಕ್ಷೇತ್ರದ ಜನರಿಗೆ ನೋವಾಗಿರುತ್ತದೆ. ಸಾಮಾಜಿಕವಾಗಿ ನ್ಯಾಯ ಕೊಡಬೇಕು, ಗೆದ್ದವರಿಗೆ ಅವಕಾಶ ನೀಡಬೇಕು ಎನ್ನುವ ಮೂಲಕ ಎಂಎಲ್‌ಸಿ ಸಿ.ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಿದಕ್ಕಾಗಿ ವಿರೋಧ ವ್ಯಕ್ತಪಡಿಸಿದರು.

ಎಂಟಿಬಿ ನಾಗರಾಜ್ ಹಾಗೂ ಆರ್‌. ಶಂಕರ್‌ಗೆ ಕೊಟ್ಟಿದ್ದಕ್ಕೆ ಬೇಸರ ಇಲ್ಲ, ಆದರೆ ಸೋತವರಿಗೆ ಕೊಟ್ಟಿದ್ದಕ್ಕಾಗಿ ಬೇಸರ ಆಗಿದೆ. ಹಲವು ಬಾರಿ ಶಾಸಕರಾಗಿರುವ ನಮಗೆ ಸಚಿವ ಸ್ಥಾನ ನೀಡದೆ ಇದ್ದಿದ್ದಕ್ಕಾಗಿ ಕಾರ್ಯಕರ್ತರಿಗೆ ನೋವಾಗಿದೆ. ಆದರೆ ನಾನು ಯಾವುದೇ ಲಾಬಿ ಮಾಡಿಲ್ಲ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ