ಆ್ಯಪ್ನಗರ

ಪರಿಷತ್ ಗಲಾಟೆ: ಪ್ರತಾಪ ಚಂದ್ರ ಶೆಟ್ಟಿ ರಾಜೀನಾಮೆಗೆ ಮುಂದಾದರೂ ಸಿದ್ದರಾಮಯ್ಯ ಬಿಡುತ್ತಿಲ್ಲ, ರೇಣುಕಾಚಾರ್ಯ ಆರೋಪ

ಪ್ರತಾಪ ಚಂದ್ರ ಶೆಟ್ಟಿ ರಾಜೀನಾಮೆಗೆ ಮುಂದಾದರೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದಕ್ಕೆ ಅವಕಾಶ ಕೊಡುತ್ತಿಲ್ಲ ಎಂದು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಆರೋಪಿಸಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka Web 16 Dec 2020, 3:34 pm
ಬೆಂಗಳೂರು: ವಿಧಾನಪರಿಷತ್‌ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ರಾಜೀನಾಮೆಗೆ ಮುಂದಾದರೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಡುತ್ತಿಲ್ಲ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
Vijaya Karnataka Web mp renukacahrya


ವಿಧಾನಪರಿಷತ್‌ನಲ್ಲಿ ಮಂಗಳವಾರ ನಡೆದ ಘಟನೆಯನ್ನು ರಾಜ್ಯದ ಜನ ಖಂಡನೆ ಮಾಡಿದ್ದಾರೆ. ಇಂತಹ ಘಟನೆ ಪರಿಷತ್‌ಗೆ ಇತಿಹಾಸಕ್ಕೆ ಒಂದು ಕಪ್ಪುಚುಕ್ಕೆಯಾಗಿದೆ. ಕಾಂಗ್ರೆಸ್‌ ಪಕ್ಷ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿದರು.

ಪರಿಷತ್ ಕೋಲಾಹಲ: ಮುಂದುವರಿದ ಕಾಂಗ್ರೆಸ್ ಬಿಜೆಪಿ ಟ್ವೀಟ್‌ ಸಮರ

ಈ ಹಿಂದೆ ವಿಧಾನಪರಿಷತ್‌ ಸಭಾಪತಿಯಾಗಿದ್ದ ಶಂಕರ್‌ ಮೂರ್ತಿಯವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದ ಸಂದರ್ಭದಲ್ಲಿ ಅವರು ಪೀಠದಲ್ಲಿ ಕೂರದೆ ಉಪಸಭಾಪತಿಗೆ ಕುಳಿತುಕೊಳ್ಳಲು ಅವಕಾಶ ನೀಡಿದರು. ಅಲ್ಲದೆ ಗೌರವಯುತವಾಗಿ ಚರ್ಚೆ ನಡೆಸಲು ಕೂಡಾ ಅವಕಾಶ ನೀಡಿದರು.

ಆದರೆ ಪರಿಷತ್‌ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ಕೊಡಲು ಮುಂದಾದರೂ ವಿರೋಧ ಪಕ್ಷದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಬಿಡುತ್ತಿಲ್ಲ ಎಂದು ಆರೋಪಿಸಿದರು. ಇದರ ಪರಿಣಾಮವಾಗಿ ಪ್ರತಾಪಚಂದ್ರ ಶೆಟ್ಟಿ ಬಲಿಪಶುವಾಗಿದ್ದಾರೆ. ಬಿಹಾರ ಪಶ್ಚಿಮ ಬಂಗಾಳ , ಉತ್ತಮ ಪ್ರದೇಶದ ಮಾದರಿಯಲ್ಲಿ ಕಾಂಗ್ರೆಸ್ ಗೂಂಡಾಗಿರಿ ಪ್ರದರ್ಶನ ಮಾಡುತ್ತಿದೆ ಎಂದರು.

ವಿಧಾನಪರಿಷತ್ ಸಭಾಪತಿ ಪ್ರತಾಪ ಚಂದ್ರಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾನ ನಿರ್ಣಯ ಮಂಡನೆ ಮಾಡಿದೆ. ಇದಕ್ಕೆ ಜೆಡಿಎಸ್‌ ಕೂಡಾ ಬೆಂಬಲ ನೀಡಿದೆ. ಈ ವಿಚಾರವಾಗಿ ವಿಧಾನಪರಿಷತ್‌ನಲ್ಲಿ ಮಂಗಳವಾರ ಕೋಲಾಹಲವೇ ನಡೆದಿದೆ. ಬಿಜೆಪಿ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ನೀಡಿದ್ದು, ಕಾಂಗ್ರೆಸ್ ಮುಂದಿನ ನಡೆ ಕೂಡಾ ಕುತೂಹಲ ಕೆರಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ