ಆ್ಯಪ್ನಗರ

ಎಂಟಿಬಿ ನಾಗರಾಜ್‌ಗೆ ಎಂಎಲ್‌ಸಿ ಸ್ಥಾನ! ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದ ಅಶೋಕ್

ಉಪ ಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್‌ ಅವರನ್ನು ಎಂಎಲ್‌ಸಿ ಮಾಡಲಾಗುವುದು ಎಂದು ಸಚಿವ ಆರ್‌. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 2 Jun 2020, 4:46 pm
ಬೆಂಗಳೂರು: ಉಪಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ ಎಂಟಿಬಿ ನಾಗರಾಜ್‌ ಅವರನ್ನು ಎಂಎಲ್‌ಸಿ ಮಾಡುತ್ತೇವೆ ಈ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಸಚಿವ ಆರ್‌. ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಎಂಟಿಬಿ ಮೇಲೆ ವಿಶೇಷ ಪ್ರೀತಿ ಇದೆ ಎಂದರು.
Vijaya Karnataka Web mtb nagaraj


ಕಷ್ಟ ಕಾಲದಲ್ಲಿ ಎಂಟಿಬಿ ನಾಗರಾಜ್‌ ಬಿಜೆಪಿ ಪಕ್ಷದ ಕೈ ಹಿಡಿದಿದ್ದಾರೆ. ಈ ನಿಟ್ಟಿನಲ್ಲಿ ಅವರು ಕಷ್ಟದಲ್ಲಿ ಇದ್ದಾಗ ಕೈ ಹಿಡಿಯುವುದು ನಮ್ಮ ಕರ್ತವ್ಯ. ಈ ಜಾವಾಬ್ದಾರಿ ಬಿಜೆಪಿಗೆ ಇದೆ. ಅವರಿಗೆ ಕೊಟ್ಟ ಮಾತು ನಡೆಸಿಕೊಳ್ಳುತ್ತೇವೆ ಎಂದರು.

'ನನ್ನನ್ನು ಎಂಎಲ್‌ಸಿ ಮಾಡಿದ್ರೆ ಬಿಜೆಪಿಗೆ ಶಕ್ತಿ, ಆದ್ರೆ ನಾನು ಬಿಜೆಪಿ ಸೇರಲ್ಲ': ವಾಟಾಳ್

ಹೊಸಕೋಟೆಗೆ ಎಂಟಿವಿ ನಾಗರಾಜ್‌ ಅವರೇ ಪಕ್ಷಾತೀತ ನಾಯಕರು. ಬೇರೆ ಯಾರೂ ಬಂದರೂ ತೆಗೆದುಕೊಳ್ಳುವುದಿಲ್ಲ ಎನ್ನುವ ಮೂಲಕ ಬಿ.ಎನ್‌ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಬಿಜೆಪಿಗೆ ಸೇರ್ಪಡೆ ವಿಚಾರವನ್ನು ಪರೋಕ್ಷವಾಗಿ ಅಲ್ಲಗಳೆದರು.

ಎಂಬಿಟಿ ನಾಗರಾಜ್‌ ಅವರನ್ನು ನಾನು ಬಿಜೆಪಿ ಪಕ್ಷಕ್ಕೆ ಕರೆದುಕೊಂಡು ಬಂದಿದ್ದೇನೆ. ಈ ಕಾರಣಕ್ಕಾಗಿ ಅವರ ಮೇಲೆ ಪ್ರೀತಿ, ಅವರಿಗೆ ಅಧಿಕಾರ ಕೊಡಿಸುವುದು ನಮ್ಮ ಜಾವಾಬ್ದಾರಿ. ಈ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ