ಆ್ಯಪ್ನಗರ

ಶಾಸಕರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಮುನಿರತ್ನ ಹಾಗೂ ರಾಜೇಶ್ ಗೌಡ

ಆರ್‌ ಆರ್‌ ನಗರ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿದ ಮುನಿರತ್ನ ನಾಯ್ಡು ಹಾಗೂ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದ ರಾಜೇಶ್ ಗೌಡ ಸೋಮವಾರದಂದು ವಿಧಾನಸೌಧದಲ್ಲಿ ಶಾಸಕರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

Vijaya Karnataka Web 23 Nov 2020, 4:52 pm
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ಮುನಿರತ್ನ ನಾಯ್ಡು ಸೋಮವಾರ ಶಾಸಕರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ವಿಧಾನಸಭೆಯಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
Vijaya Karnataka Web muniratna mla


ರಾಜರಾಜೇಶ್ವರಿ ದೇವಿಯ ಹೆಸರಿನಲ್ಲಿ ಮುನಿರತ್ನ ಪ್ರತಿಜ್ಞಾವಿಧಿ ಸ್ವೀಕರಿಸಿದರೆ ಅದೇ ರೀತಿ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದ ಡಾ. ರಾಜೇಶ್ ಗೌಡ ಕೂಡಾ ಸೋಮವಾರ ಶಾಸಕರಾಗಿ ದೇವರ ಹೆಸರಿನಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.

ಬಿಎಸ್‌ವೈ ಅವರನ್ನು ಭೇಟಿ ಮಾಡಿದ ಮುನಿರತ್ನ, ಕುತೂಹಲ ಕೆರಳಿಸಿದ ಪ್ರತ್ಯೇಕ ಮಾತುಕತೆ

ಸಾಕಷ್ಟು ಕುತೂಹಲಕ್ಕೆ ಕಾರಣವಾದ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವನ್ನು ಸಾಧಿಸಿತ್ತು. ಆರ್‌ಆರ್‌ ನಗರದಲ್ಲಿ ಕಾಂಗ್ರೆಸ್‌ನಿಂದ ಕುಸುಮಾ ಎಚ್‌ ಸ್ಪರ್ಧೆ ನಡೆಸಿದ್ದರು ಇನ್ನು ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ ಜಯಚಂದ್ರ ಸ್ಪರ್ಧೆ ನಡೆಸಿದ್ದರು.

ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ರಾಜರಾಜೇಶ್ವರಿ ನಗರದಲ್ಲಿ ಭಾರೀ ಅಂತರದಿಂದ ಮುನಿರತ್ನ ಗೆಲುವು ಸಾಧಿಸಿದ್ದಾರೆ. ಸುಮಾರು 57 ಸಾವಿರ ಮತಗಳ ಅಂತರದಿಂದ ಗೆದ್ದು ಕಾಂಗ್ರೆಸ್‌ಗೆ ಮುಖಭಂಗ ಉಂಟುಮಾಡಿದ್ದಾರೆ. ಇನ್ನು ಶಿರಾದಲ್ಲೂ ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ಗೆ ರಾಜೇಶ್ ಗೌಡ ಅಚ್ಚರಿ ನೀಡಿದ್ದರು. ಇದೀಗ ಇಬ್ಬರು ಶಾಸಕರು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಶಾಸಕರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಪ್ರತಿಜ್ಞಾವಿಧಿ ಸ್ವೀಕರಿಸಿದ ಬಳಿಕ ಮಾಧ್ಯಮದವರ ಬಳಿ ಮಾತನಾಡಿದ ಶಾಸಕ ಮುನಿರತ್ನ, ಸಚಿವ ಸ್ಥಾನ ನೀಡುವುದು ಬಿಡುವುದು ಮುಖ್ಯಮಂತ್ರಿ ರವರಿಗೆ ಬಿಟ್ಟಿದ್ದು, ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ನಮ್ಮ ನಾಯಕರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ಬದ್ಧ ಎಂದರು.

ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್ ಹಾಗೂ ನಾನು ಒಟ್ಟಾಗಿದ್ದೇವೆ. ಸಿದ್ದಗಂಗಾ ಮಠದಲ್ಲಿ ನಾನು ಎಸ್.ಟಿ.ಸೋಮಶೇಖರ್ ಅವರ ಹೇಳಿಕೆ ಗಮನಿಸಿದ್ದೇನೆ. ಮೂವರು ಒಟ್ಟಾಗಿ ಇದ್ದೇವೆ, ಎಸ್ ಬಿ ಎಮ್ ನಲ್ಲಿ ಬಿರುಕು ಬಿಟ್ಟಿಲ್ಲ. ಎಸ್ ಬಿ ಎಮ್ ಲೋಗೊ ಒಂದೆ ಅದು ಬಿಜೆಪಿ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಡಿಕೆ ಸುರೇಶ್ ಗೆ ಟಾಂಗ್ ನೀಡಿದ ಮುನಿರತ್ನ, ಲೋಕಸಭಾ ಚುನಾವಣೆಯಲ್ಲಿ ಅವರು 2.5 ಲಕ್ಷ ಮತಗಳಿಂದ ಗೆದ್ದಾಗ ಇವಿಎಂ ಸಮಸ್ಯೆ ಆಗಲಿಲ್ಲ. ಈಗ ನಾನು ಗೆದ್ದಾಗ ಇವಿಎಂ ಮೇಲೆ ಸಂದೇಹ ವ್ಯಕ್ತಪಡಿಸಿದ್ದಾರೆ ಎಂದು ಕಿಡಿ ಕಾರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ