ಆ್ಯಪ್ನಗರ

ಹೊನ್ನಾಳಿಯಲ್ಲಿ ಮುಸ್ಲಿಮರು ಮತ ಹಾಕಿಲ್ಲ, ಈ ಸಮುದಾಯಕ್ಕೆ ವಿಶೇಷ ಪ್ಯಾಕೇಜ್‌ ಕೊಡಲ್ಲ: ರೇಣುಕಾಚಾರ್ಯ

ಬೆಂಗಳೂರಿನ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರೇಣುಕಾಚಾರ್ಯ, ಹೊನ್ನಾಳಿಯಲ್ಲಿ ನನಗೆ ಕಳೆದ ಚುನಾವಣೆಯಲ್ಲಿ ಒಬ್ಬ ಮುಸ್ಲಿಮರೂ ಮತ ಹಾಕಿಲ್ಲ. ಹೀಗಾಗಿ ಅವರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲ್ಲ ಎಂದು ಹೇಳಿದ್ದಾರೆ.

Vijaya Karnataka Web 23 Jan 2020, 8:05 am
ಬೆಂಗಳೂರು: ''ಹೊನ್ನಾಳಿಯಲ್ಲಿ 4 ಚುನಾವಣೆ ಎದುರಿಸಿರುವ ನನಗೆ ಮುಸ್ಲಿಮರು ಮತ ಹಾಕುತ್ತಿಲ್ಲ. ಕಳೆದ ಚುನಾವಣೆಯಲ್ಲಿ ನನಗೆ ಮುಸ್ಲಿಂ ಸಮುದಾಯದಿಂದ ಒಂದೂ ಮತ ಬಂದಿಲ್ಲ. ಅಭಿವೃದ್ಧಿ ಕೆಲಸ ಮಾಡಲು ನಾನು ಬೇಕು, ವೋಟು ಮಾತ್ರ ಕಾಂಗ್ರೆಸಿಗರಿಗೆ ಎಂಬುದು ಯಾವ ನ್ಯಾಯ? ಹೀಗಾಗಿ ಇನ್ನುಮುಂದೆ ನನ್ನ ಮತಕ್ಷೇತ್ರದಲ್ಲಿ ಈ ಸಮುದಾಯಕ್ಕೆ ಯಾವುದೇ ವಿಶೇಷ ಪ್ಯಾಕೇಜ್‌ ಕೊಡುವುದಿಲ್ಲ. ಹೊನ್ನಾಳಿಯನ್ನು ಸಂಪೂರ್ಣ ಕೇಸರೀಕರಣ ಮಾಡುತ್ತೇನೆ,'' ಎಂದು ರೇಣುಕಾಚಾರ್ಯ ಘೋಷಿಸಿದ್ದಾರೆ.
Vijaya Karnataka Web renukacharya toi 2020


ಕೆಲವು ಮಸೀದಿಗಳು ಮದ್ದು ಗುಂಡು ಸಂಗ್ರಹ ಹಾಗೂ ಭಯೋತ್ಪಾದಕ ತಾಣಗಳಾಗಿದ್ದು, ಮದರಸಾಗಳಲ್ಲಿ ಮಕ್ಕಳ ಮೈಂಡ್‌ವಾಷ್‌ ಮಾಡಿ ಭಯೋತ್ಪಾದಕರನ್ನು ಸೃಷ್ಟಿಸಲಾಗುತ್ತಿದೆ ಎಂದೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ವಿಕಾಸಸೌಧದ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ''ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಪಿಎಫ್‌ಐ ಹಾಗೂ ಎಸ್‌ಡಿಪಿಐ ನಿಷೇಧಿಸುವಂತೆ ಕೇಂದ್ರಕ್ಕೆ ರಾಜ್ಯ ಸರಕಾರ ಶಿಫಾರಸು ಮಾಡುತ್ತಿದೆ. ಇದಕ್ಕೆ ಪ್ರತಿಯಾಗಿ, ಸಂಘ ಪರಿವಾರದ ಸಂಘಟನೆಗಳನ್ನೂ ನಿಷೇಧಿಸುವಂತೆ ಮಾಜಿ ಸಚಿವರಾದ ಯು.ಟಿ.ಖಾದರ್‌ ಮತ್ತು ಜಮೀರ್‌ ಅಹ್ಮದ್‌ ಒತ್ತಾಯಿಸುತ್ತಿರುವುದು ದುರದೃಷ್ಟಕರ. ಸಂಘ ಪರಿವಾರದವರು ದೇಶವನ್ನ ಉಳಿಸೋ ಕೆಲಸ ಮಾಡ್ತಿದ್ದಾರೆ. ನೆರೆ ಸಂದರ್ಭಗಳಲ್ಲಿ ಸ್ವಯಂ ಸೇವಕರಂತೆ ತೊಡಗಿಸಿಕೊಂಡು, ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ. ಇಂತಹ ಆಪಾದನೆ ಮಾಡುತ್ತಿರುವ ಈ ಇಬ್ಬರೂ ನಾಯಕರು ದೇಶದ್ರೋಹಿಗಳು,'' ಎಂದಿದ್ದಾರೆ.

ಮದ್ದುಗುಂಡು ಸಂಗ್ರಹಿಸುತ್ತಿರುವ ಮಸೀದಿಗಳನ್ನು ರೇಡ್ ಮಾಡ್ತೇವೆ: ರೇಣುಕಾಚಾರ್ಯ

''ದೇಶದ ಮುಸ್ಲಿಮರು ನಿಜಕ್ಕೂ ಭಾರತೀಯರು ಎಂದಾದರೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಒಪ್ಪಬೇಕು. ಪೌರತ್ವ ಕಾಯಿದೆ ವಿರುದ್ಧ ಪ್ರತಿಭಟನೆ ನಡೆಸುವಂತೆ ಮಸೀದಿಗಳಲ್ಲಿ ಪತ್ವಾ ಹೊರಡಿಸಲಾಗುತ್ತಿದೆ. ಇದಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳೂ ರಾಜಕೀಯ ಕಾರಣಕ್ಕಾಗಿ ಬೆಂಬಲವಾಗಿ ನಿಂತಿವೆ,'' ಎಂದು ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

ಶಸ್ತ್ರಾಸ್ತ್ರ ಸಂಗ್ರಹಿಸಿಡುವ ಮಸೀದಿಗಳು ಬೇಕಾ?: ರೇಣುಕಾಚಾರ್ಯ ವಿವಾದಿತ ಹೇಳಿಕೆ, ರಾಷ್ಟ್ರಮಟ್ಟದಲ್ಲಿ ಚರ್ಚೆ

ಸರ್ಕಾರಿ ಬಸ್ ಡ್ರೈವರ್ ಆದ ರೇಣುಕಾಚಾರ್ಯ..! ಪ್ರಯಾಣಿಕರನ್ನು ನಗಿಸುತ್ತಾ ಬರೋಬ್ಬರಿ 58 ಕಿ.ಮೀ ಡ್ರೈವಿಂಗ್..!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ