ಆ್ಯಪ್ನಗರ

ಬೆಂಕಿ ಹಚ್ಚುವ ಹೇಳಿಕೆ ನಳಿನ್‌ ವಿರುದ್ಧದ ಪ್ರಕರಣ ರದ್ದು

ಬಿಜೆಪಿ ಕಾರ‍್ಯಕರ್ತನ ಕೊಲೆ ಆರೋಪಿಗಳನ್ನು ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ನೂತನ ...

Vijaya Karnataka 28 Aug 2019, 5:00 am
ಬೆಂಗಳೂರು: ಬಿಜೆಪಿ ಕಾರ‍್ಯಕರ್ತನ ಕೊಲೆ ಆರೋಪಿಗಳನ್ನು ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ಮಂಗಳವಾರ ರದ್ದುಗೊಳಿಸಿದೆ.
Vijaya Karnataka Web BNG-2608-2-2-KATEEL


ಕೋಣಾಜೆ ಠಾಣಾ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಕಟೀಲ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯಪೀಠ ಮಾನ್ಯ ಮಾಡಿದೆ.

ತನಿಖೆಗೂ ಮುನ್ನ ಕಾನೂನು ಪ್ರಕ್ರಿಯೆ ಪಾಲಿಸಿಲ್ಲ. ಜೊತೆಗೆ ನಿಯಮದಂತೆ ದೂರುದಾರರು ಮ್ಯಾಜಿಸ್ಪ್ರೇಟ್‌ ಅನುಮತಿ ಪಡೆಯಬೇಕಿತ್ತು.ಆದರೆ ಇದರಲ್ಲಿ ಪೊಲೀಸರೇ ಅನುಮತಿ ಪಡೆದಿದ್ದಾರೆ. ಹಾಗಾಗಿ ಇದು ಊರ್ಜಿತವಾಗುವುದಿಲ್ಲ ಎಂದು ನ್ಯಾಯಪೀಠ ಹೇಳಿತು.

2017ರ ಜ.1ರಂದು, ಬಿಜೆಪಿ ಕಾರ‍್ಯಕರ್ತ ಕಾರ್ತಿಕ ರಾಜ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದ ಹಂತದಲ್ಲಿ ಕೋಣಾಜೆ ಪೊಲೀಸ್‌ ಠಾಣೆಗೆ ತೆರಳಿ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು, ಇಲ್ಲವಾದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಿಸಬೇಕಾಗುತ್ತದೆ ಎಂದು ಕಟೀಲ್‌ ಬೆದರಿಕೆ ಒಡ್ಡಿದ್ದರು ಎನ್ನಲಾಗಿದೆ. ಈ ಕುರಿತು ಸಂತೋಷ್‌ ಕುಮಾರ್‌ ಶೆಟ್ಟಿ ಜ.2ರಂದು ಕೋಣಾಜೆ ಠಾಣೆಗೆ ದೂರು ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ