ಆ್ಯಪ್ನಗರ

ಡಿಕೆಶಿ ಬಂಧನದ ಹಿಂದೆ ಸಿದ್ದರಾಮಯ್ಯ ಕೈವಾಡ!: ಕಟೀಲ್ ಬಾಂಬ್

ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರ ವಿರುದ್ಧ ಐಟಿ ದಾಳಿ ನಡೆದಾಗ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಅವರ ತಾಯಿ ಹರಿಹಾಯ್ದಿದ್ದರು. ಇದೀಗ ಇಡಿ ಡಿಕೆಶಿ ಅವರನ್ನು ಬಂಧಿಸಿದೆ. ಈ ಬಂಧನಕ್ಕೂ ಸಿದ್ದರಾಮಯ್ಯ ಅವರೇ ಕಾರಣ ಎಂದು ಬಿಜೆಪಿ ಹೊಸ ಬಾಂಬ್ ಸಿಡಿಸಿದೆ.

Vijaya Karnataka Web 8 Sep 2019, 1:06 pm
ಬಾಗಲಕೋಟೆ: ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿರುವುದರ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
Vijaya Karnataka Web kateel siddu dks


ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಡಿಕೆಶಿ ಮೇಲೆ ಕೇಸ್ ಹಾಕೋದಕ್ಕೆ ಸಿದ್ದರಾಮಯ್ಯ ಕಾರಣ ಎಂದರು. ನಮಗೆ ಸಿದ್ದರಾಮಯ್ಯ ಮೇಲೆ ಸಂಶಯ ಇದೆ, ಡಿಕೆಶಿ ಬೆಳೆಯುತ್ತಾರೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಟೀಲ್ ಆರೋಪಿಸಿದ್ದಾರೆ.

ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಕರ್ನಾಟಕ ಸರಕಾರ ಒಳಗೆ ಹಾಕಿಲ್ಲ ಎಂದಿರುವ ಕಟೀಲ್, ಯಾವುದೇ ಲೋಕಾಯುಕ್ತ ಅಧಿಕಾರಿಗಳೂ ಡಿ. ಕೆ. ಶಿವಕುಮಾರ್ ಅವರನ್ನು ಒಳಗೆ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದರು. 2017ರಲ್ಲಿ ಐಟಿ ದಾಳಿ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರವೇ ಇತ್ತು. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ನಿಲ್ಲಿಸಬಹುದಿತ್ತಲ್ಲ? ಯಾಕೆ ನಿಲ್ಲಿಸಲಿಲ್ಲ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಡಿ. ಕೆ. ಶಿವಕುಮಾರ್ ಅವರ ಬಂಧನದ ಹಿಂದೆ ಯಾವುದೇ ರಾಜಕೀಯ ದ್ವೇಷವಿಲ್ಲ ಎಂದು ಸ್ಪಷ್ಟನೆ ನೀಡಿದ ಕಟೀಲ್, ರಾಜಕೀಯ ದ್ವೇಷ ಮಾಡೋದೇ ಆಗಿದ್ರೆ ಚುನಾವಣೆಗೆ ಮುನ್ನವೇ ಮಾಡಬಹುದಿತ್ತು, ಚುನಾವಣೆಗೆ ಮುಂಚೆಯೇ ಒಳಗೆ ಹಾಕಬಹುದಿತ್ತಲ್ಲ ಎಂದು ಪ್ರಶ್ನಿಸಿದ್ದಾರೆ. ಡಿಕೆಶಿ ಭ್ರಷ್ಟಾಚಾರ ಆರೋಪದಲ್ಲಿ ಒಳಗೆ ಹೋಗಿದ್ದಾರೆ. ಆದರೆ, ಕಾಂಗ್ರೆಸ್‌ನವರಿಗೆ ಈಗ ಮುಖ ಉಳಿಸಿಕೊಳ್ಳಬೇಕಾಗಿದೆ, ತಮ್ಮ ಮುಖ ಉಳಿಸಿಕೊಳ್ಳೋದಕ್ಕಾಗಿ ಹೀಗೆಲ್ಲಾ ಮಾತಾಡ್ತಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಯಾವತ್ತೂ ದಾಖಲಾತಿಗಳನ್ನು ನೋಡಿಕೊಂಡೇ ಪ್ರಕರಣ ದಾಖಲು ಮಾಡುತ್ತೆ. ಅಕ್ರಮಗಳ ಕೇಸ್ ದಾಖಲು ಮಾಡಿದ ಬಳಿಕವೇ ಡಿಕೆಶಿ ಅರೆಸ್ಟ್ ಮಾಡಲಾಗಿದೆ ಎಂದು ಕೇಂದ್ರೀಯ ಸಂಸ್ಥೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮರ್ಥಿಸಿಕೊಂಡಿದ್ದಾರೆ.

ಡಿಕೆಶಿ ಪ್ರಕರಣದಲ್ಲಿ ಮೋದಿ, ಶಾ ತೆಗಳಿಕೆಗೆ ಆಕ್ಷೇಪ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ