ಆ್ಯಪ್ನಗರ

ಶುಕ್ರವಾರ ನೂತನ ಸಿಜೆ ಅಧಿಕಾರ ಸ್ವೀಕಾರ

ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ವಿ.ಆರ್‌. ವಾಲಾ ಅವರು ನೂತನ ಸಿಜೆ ಎ.ಎಸ್‌.ಒಕಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋದಿಸುವರು. ಒಕಾ ರಾಜ್ಯ ಹೈಕೋರ್ಟ್‌ನ 30ನೇ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ.

Vijaya Karnataka 7 May 2019, 8:18 am
ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾ.ಅಭಯ್‌ ಶ್ರೀನಿವಾಸ್‌ ಒಕಾ ಶುಕ್ರವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Vijaya Karnataka Web High Court


ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ವಿ.ಆರ್‌. ವಾಲಾ ಅವರು ನೂತನ ಸಿಜೆ ಎ.ಎಸ್‌.ಒಕಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋದಿಸುವರು. ಒಕಾ ರಾಜ್ಯ ಹೈಕೋರ್ಟ್‌ನ 30ನೇ ಮುಖ್ಯ ನ್ಯಾಯಮೂರ್ತಿಗಳಾಗಲಿದ್ದಾರೆ.

ಕಳೆದ ಜ.15ರಂದು ಕರ್ನಾಟಕ ಹೈಕೋರ್ಟ್‌ ಸಿಜೆಯಾಗಿದ್ದ ನ್ಯಾ.ದಿನೇಶ್‌ ಮಹೇಶ್ವರಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಹಂಗಾಮಿ ಸಿಜೆಯಾಗಿ ಹಿರಿಯ ನ್ಯಾ. ಎಲ್‌. ನಾರಾಯಣಸ್ವಾಮಿಯನ್ನು ನೇಮಕ ಮಾಡಲಾಗಿತ್ತು.ಬಾಂಬೆ ಹೈಕೋರ್ಟ್‌ನಲ್ಲಿ ಹಿರಿಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದ ಎ.ಎಸ್‌.ಒಕಾ ಅವರನ್ನು ನೇಮಕ ಮಾಡಲು ಸುಪ್ರೀಂಕೋರ್ಟ್‌ ಕೊಲಿಜಿಯಂ ಏ.9 ರಂದು ಕೇಂದ್ರಕ್ಕೆ ಶಿಫಾರಸು ಮಾಡಿತ್ತು.ಅದನ್ನು ಅಂಗೀಕರಿಸಿ ರಾಷ್ಟ್ರಪತಿಗಳು ಒಕಾ ನೇಮಕ ಆದೇಶ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ