ಆ್ಯಪ್ನಗರ

ರಾಜ್ಯದಲ್ಲಿ ಹಕ್ಕಿ ಜ್ವರ ಪತ್ತೆಯಾಗಿಲ್ಲ; ಆತಂಕ ಬೇಡ, ಮುಂಜಾಗರೂಕತೆ ಇರಲಿ

ಕೇರಳದಲ್ಲಿ ಕಂಡುಬಂದಿರುವ ಹಕ್ಕಿಜ್ವರ ರಾಜ್ಯದಲ್ಲಿ ಇದುವರೆಗೂ ಪತ್ತೆಯಾಗಿಲ್ಲ. ಈ ನಿಟ್ಟಿನಲ್ಲಿ ಆತಂಕ ಪಡಬೇಕಾದ ಅಗತ್ಯ ಇಲ್ಲ. ಹೀಗಿದ್ದರೂ ಮುಂಜಾಗರೂಕತೆಯನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಗಡಿ ಭಾಗದ ಜಿಲ್ಲೆಗಳ ಮೇಲೆ ನಿಗಾ ಇಟ್ಟಿದೆ.

Vijaya Karnataka Web 8 Jan 2021, 11:13 am
ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಹಕ್ಕಿ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಆತಂಕದ ವಾತಾವರಣ ನಿರ್ಮಾನವಾಗಿದೆ. ಆದರೆ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ತಿಳಿಸಿದ್ದಾರೆ.
Vijaya Karnataka Web Bird flu
(PTI photo)


ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕೆಲವೆಡೆ ಹಕ್ಕಿಗಳು ಸತ್ತಿರುವುದು ಬೇರೆ ಬೇರೆ ಕಾರಣಕ್ಕಾಗಿ. ಆದರೂ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮುಂಜಾಗರೂಕತಾ ಕ್ರಮವಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಹಕ್ಕಿ ಜ್ವರ ಭೀತಿ ನಡುವೆ ಹಿಮಾಚಲದ ರಾಷ್ಟ್ರೀಯ ಹೆದ್ದಾರಿಯಲ್ಲಿ 500 ಸತ್ತ ಕೋಳಿಗಳು ಪತ್ತೆ

ರಾಜ್ಯದಲ್ಲಿ ಹಕ್ಕಿ ಜ್ವರದ ಪ್ರಕರಣಗಳು ವರದಿ ಆಗದೇ ಇದ್ದರೂ, ಅನುಮಾನಾಸ್ಪದವಾಗಿ ಪಕ್ಷಿಗಳು ಸತ್ತಿದ್ದರೆ ಅದನ್ನು ಮುಟ್ಟಬೇಡಿ, ಕೋಳಿ ಮಾಂಸ, ಮೊಟ್ಟೆ ತಿನ್ನುವಾಗ ಹೆಚ್ಚಿ ಬೇಯಿಸಿ ತಿನ್ನಿ ಎಂದು ಸಲಹೆ ನೀಡಿದ್ದಾರೆ. ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಗಡಿ ಭಾಗದ ಜಿಲ್ಲೆಗಳ ಮೇಲೆ ವಿಶೇಷ ನಿಗಾ ಇಡಲಾಗಿದೆ. ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ.

ಸಂಕ್ರಾಂತಿಗೆ ವಿಶೇಷ ಮಾರ್ಗಸೂಚಿ ಇಲ್ಲ

ರಾಜ್ಯದಲ್ಲಿ ಕೋವಿಡ್‌ ಕಾರಣಕ್ಕಾಗಿ ಸಂಕ್ರಾಂತಿಗೆ ಯಾವುದೇ ವಿಶೇಷ ಕಾರ್ಯಸೂಚಿ ಇಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ. ಆದರೆ ಕೋವಿಡ್‌ ಮುನ್ನೆಚ್ಚರಿಕೆಯ ಕ್ರಮವಾಗಿ ಜನಜಂಗುಳಿ ಇಲ್ಲದೆ ಸರಳವಾಗಿ ಸಂಕ್ರಾಂತಿಯನ್ನು ಆಚರಿಸಿ ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ