ಹಿಂದೂ ಮುಖಂಡರ ಹತ್ಯೆಗೆ ಸಂಚು, ರಾಜ್ಯದ ವೈದ್ಯ ಸೇರಿ ಇಬ್ಬರ ವಿರುದ್ಧ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಕೆ
ಹಿಂದೂ ಮುಖಂಡರ ಹತ್ಯೆಗೆ ಸಂಚು ಪ್ರಕರಣದಲ್ಲಿ ಎಲ್ಇಟಿ ಉಗ್ರ ಸಂಘಟನೆ ಸದಸ್ಯನಾಗಿರುವ ಬೆಂಗಳೂರಿನ ವೈದ್ಯ ಸೇರಿ ಇಬ್ಬರ ವಿರುದ್ಧ ಎನ್ಐಎ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ.
Vijaya Karnataka Web 23 Feb 2021, 2:45 pm
ಹೈಲೈಟ್ಸ್:
- ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣ
- ಬೆಂಗಳೂರಿನ ವೈದ್ಯ ಡಾ. ಸಬೀಲ್ ಅಹಮದ್ ಸೇರಿ ಇಬ್ಬರ ವಿರುದ್ಧ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ ಎನ್ಐಎ
- ಕರಣದಲ್ಲಿ ತನಿಖೆ ನಡೆಸಿರುವ ಎನ್ಐಎ, ಈಗಾಗಲೇ 17 ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸಂಚು ಪ್ರಕರಣದಲ್ಲಿ'ಲಷ್ಕರೆ ತಯ್ಬಾ' (ಎಲ್ಇಟಿ) ಉಗ್ರ ಸಂಘಟನೆ ಸದಸ್ಯನಾಗಿರುವ ಬೆಂಗಳೂರಿನ ವೈದ್ಯ ಸೇರಿ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್ಐಎ) ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಕಾಕ್ಸ್ಟೌನ್ನಲ್ಲಿ ನೇಮಿಸಿದ್ದ ಡಾ. ಸಬೀಲ್ ಅಹಮದ್ ಮತ್ತು ಹೈದರಾಬಾದ್ನ ಅಸಾದುಲ್ಲಾಖಾನ್ ವಿರುದ್ಧ ಬೆಂಗಳೂರಿನ ಎನ್ಐಎ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 2012ರ ಆಗಸ್ಟ್ 29ರಂದು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎನ್ಐಎ ಹೈದರಾಬಾದ್ ಘಟಕ ವಹಿಸಿಕೊಂಡು ತನಿಖೆ ನಡೆಸಿತ್ತು.
ಪ್ರಕರಣದಲ್ಲಿ ತನಿಖೆ ನಡೆಸಿರುವ ಎನ್ಐಎ, ಈಗಾಗಲೇ 17 ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ, 2016ರ ಸೆ.16ರಂದು 13 ಜನರಿಗೆ ತಲಾ 5 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಉಳಿದ ಆರೋಪಿಗಳ ವಿರುದ್ಧ ವಿಚಾರಣೆ ಮುಂದುವರಿದಿದೆ. ಇನ್ನೂ ಆರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ಎನ್ಐಎ ತಿಳಿಸಿದೆ.
ಪ್ರಕರಣದಲ್ಲಿ ತನಿಖೆ ನಡೆಸಿರುವ ಎನ್ಐಎ, ಈಗಾಗಲೇ 17 ಮಂದಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ, 2016ರ ಸೆ.16ರಂದು 13 ಜನರಿಗೆ ತಲಾ 5 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಉಳಿದ ಆರೋಪಿಗಳ ವಿರುದ್ಧ ವಿಚಾರಣೆ ಮುಂದುವರಿದಿದೆ. ಇನ್ನೂ ಆರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ಎನ್ಐಎ ತಿಳಿಸಿದೆ.