ಆ್ಯಪ್ನಗರ

ಬೆಂಗಳೂರಿನಿಂದ ನಿರ್ಮಲಾ ಸ್ಪರ್ಧೆ

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಬೆಂಗಳೂರಿನಿಂದ ಲೋಕಸಭಾ ಚುನಾವಣಾ ಕಣಕ್ಕೆ ಇಳಿಸಬೇಕೆಂಬ ಪ್ರಯತ್ನ ನಡೆಯುತ್ತಿದೆ ಎಂಬ ಸುದ್ದಿ ಬಿಜೆಪಿ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Vijaya Karnataka 27 Feb 2019, 5:00 am
ಬೆಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಬೆಂಗಳೂರಿನಿಂದ ಲೋಕಸಭಾ ಚುನಾವಣಾ ಕಣಕ್ಕೆ ಇಳಿಸಬೇಕೆಂಬ ಪ್ರಯತ್ನ ನಡೆಯುತ್ತಿದೆ ಎಂಬ ಸುದ್ದಿ ಬಿಜೆಪಿ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
Vijaya Karnataka Web Nirmala sitharamannirmala


ಬೆಂಗಳೂರು ದಕ್ಷಿಣ ಅಥವಾ ಉತ್ತರ ಲೋಕಸಭಾ ಕ್ಷೇತ್ರದಿಂದ ಅವರಿಗೆ ಟಿಕೆಟ್‌ ನೀಡಬಹುದೆಂಬ ಸುದ್ದಿಯನ್ನು ಕಳೆದೆರಡು ದಿನಗಳಿಂದ ಹರಿಬಿಡಲಾಗಿದೆ. ಆದರೆ ಬಿಜೆಪಿಯ ಹಿರಿಯ ನಾಯಕರು ಮಾತ್ರ ಈ ವಿಚಾರವನ್ನು ನಿರಾಕರಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಮತ್ತೆ ಅವರಿಗೆ ಟಿಕೆಟ್‌ ನೀಡಬೇಕೆಂಬ ಚರ್ಚೆ ಅಪ್ರಸ್ತುತ. ಬಿಜೆಪಿಯ ಪ್ರಮುಖ ನಾಯಕರೊಬ್ಬರು ಈ ವಿಚಾರವನ್ನು ಉದ್ದೇಶಪೂರ್ವಕವಾಗಿಯೇ ಹರಿಬಿಟ್ಟಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ಬಿಜೆಪಿ ಮುಖಂಡರೊಬ್ಬರು 'ವಿಕ'ಕ್ಕೆ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ