ಆ್ಯಪ್ನಗರ

ಡಿಕೆ ಶಿವಕುಮಾರ್‌ ನಿವಾಸಕ್ಕೆ ನಿರ್ಮಲಾನಂದನಾಥ ಶ್ರೀ ಭೇಟಿ

ಜಾರಿ ನಿರ್ದೇಶನಾಲಯದ ವಶದಲ್ಲಿರುವ ಡಿಕೆ ಶಿವಕುಮಾರ್‌ ನಿವಾಸಕ್ಕೆ ಈಗ ಸ್ವಾಮೀಜಿಗಳು ಭೇಟಿ ನೀಡುತ್ತಿದ್ದಾರೆ. ಕುಟುಂಬ ಸದಸ್ಯರಿಗೆ ಧೈರ್ಯ ತುಂಬುತ್ತಿದ್ದಾರೆ.

Vijaya Karnataka Web 9 Sep 2019, 9:25 pm
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್‌ ನಿವಾಸಕ್ಕೆ ನಿರ್ಮಲಾನಂದನಾಥ ಶ್ರೀಗಳು ಭೇಟಿ ನೀಡಿದರು.
Vijaya Karnataka Web ಡಿಕೆಶಿ ನಿವಾಸಕ್ಕೆ ನಿರ್ಮಲಾನಂದನಾಥ ಶ್ರೀ ಭೇಟಿ
ಡಿಕೆಶಿ ನಿವಾಸಕ್ಕೆ ನಿರ್ಮಲಾನಂದನಾಥ ಶ್ರೀ ಭೇಟಿ


ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿಕೆಶಿ ನಿವಾಸಕ್ಕೆ ಶ್ರೀಗಳು ಭೇಟಿ ನೀಡಿ ಪತ್ನಿ ಉಷಾ, ಪುತ್ರಿ ಜತೆ ಮಾತುಕತೆ ನಡೆಸಿದರು.

ಡಿಕೆ ಶಿವಕುಮಾರ್‌ ಪತ್ನಿ ಉಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಶ್ರೀಗಳು, ಧೈರ್ಯ ತುಂಬಿದರು.

ಡಿಕೆ ಶಿವಕುಮಾರ್‌ ಅವರಿಗೆ ಏನೂ ಆಗುವುದಿಲ್ಲ. ಧೈರ್ಯದಿಂದ ಇರಿ ಎಂದು ಉಷಾ ಅವರಿಗೆ ಹೇಳಿದರು.

ಇತ್ತೀಚೆಗೆ ಕೋಡಿಹಳ್ಳಿಯಲ್ಲಿರುವ ಡಿಕೆ ಶಿವಕುಮಾರ್‌ ನಿವಾಸಕ್ಕೆ ತೆರಳಿದ್ದ ನಂಜಾವಧೂತ ಶ್ರೀಗಳು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಹೊಸದಿಲ್ಲಿಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿಕೆ ಶಿವಕುಮಾರ್‌ ಅವರನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್‌ 13ರವರೆಗೆ ವಶಕ್ಕೆ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ